HomeGadag Newsಧರ್ಮಾಧಾರಿತ ಮೀಸಲಾತಿ ಅಸಾಂವಿಧಾನಿಕ

ಧರ್ಮಾಧಾರಿತ ಮೀಸಲಾತಿ ಅಸಾಂವಿಧಾನಿಕ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: 18 ಜನ ಶಾಸಕರನ್ನು ಸದನದಿಂದ ಅಮಾನತು ಮಾಡಿದ ಸ್ಪೀಕರ್ ನಿರ್ಣಯವನ್ನು ಮತ್ತು ಅಲ್ಪಸಂಖ್ಯಾತರಿಗೆ ಕಾಮಗಾರಿ ಗುತ್ತಿಗೆ ನೀಡುವಾಗ ಶೇ. 4ರಷ್ಟು ಮೀಸಲಾತಿಯನ್ನು ನೀಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಗದಗ ಜಿಲ್ಲಾ ಘಟಕದಿಂದ ಮಂಗಳವಾರ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಸರ್ಕಾರದ ಕ್ರಮವನ್ನು ಖಂಡಿಸಿದರು.

ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಶಿರಹಟ್ಟಿ ಕ್ಷೇತ್ರದ ಶಾಸಕ ಡಾ. ಚಂದ್ರು ಲಮಾಣಿ ಮಾತನಾಡಿ, ರಾಜ್ಯದ ಕಾಂಗ್ರೆಸ್ ಸರ್ಕಾರ ಎಲ್ಲ ಕ್ಷೇತ್ರಗಳಲ್ಲಿ ವಿಫಲವಾಗಿದ್ದು, ಆರ್ಥಿಕವಾಗಿ ದಿವಾಳಿಯಾಗಿದೆ. ಸರ್ಕಾರದ ಸರ್ವಾಧಿಕಾರಿ ನಿರ್ಣಯವನ್ನು ಭಾರತೀಯ ಜನತಾ ಪಾರ್ಟಿ ಖಂಡಿಸುತ್ತದೆ. ಇಂತಹ ಸಂದರ್ಭದಲ್ಲಿ ಸಭಾಧ್ಯಕ್ಷರು ನಿಯಮಾನುಸಾರ ಪಕ್ಷಾತೀತವಾಗಿ ನಿರ್ಣಯ ತೆಗೆದುಕೊಳ್ಳಬೇಕಾಗಿತ್ತು. ಆದರೆ ಅವರು ಈ ತರಹದ ನಿರ್ಣಯವನ್ನು ಯಾರ ಒತ್ತಡಕ್ಕೆ ಮಣಿದು ತೆಗೆದುಕೊಂಡಿದ್ದಾರೆ ಎಂಬುದು ತಿಳಿಯಬೇಕಾಗಿದೆ ಎಂದರು.

ಪ್ರತಿಭಟನೆಯಲ್ಲಿ ಬಿಜೆಪಿ ಗದಗ ಜಿಲ್ಲಾಧ್ಯಕ್ಷ ತೋಟಪ್ಪ(ರಾಜು) ಕುರುಡಗಿ ಸರ್ಕಾರದ ನಿರ್ಧಾರವನ್ನು ಖಂಡಿಸಿದರು. ಪ್ರತಿಭಟನಾ ಸಭೆಯ ನಂತರ ಮಾನವ ಸರಪಳಿಯನ್ನು ನಿರ್ಮಿಸಿ ಗಾಂಧಿ ವೃತ್ತದಲ್ಲಿ ರಸ್ತಾರೋಖೋ ನಡೆಸಿ, ಸರ್ಕಾರದ ನೀತಿಯನ್ನು ಖಂಡಿಸಿ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸಲಾಯಿತು.

ಪ್ರತಿಭಟನೆಯಲ್ಲಿ ಬಿಜೆಪಿ ಗದಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಂಗರಾಜ ಪಾಟೀಲ, ಪಕ್ಕಿರೇಶ ರಟ್ಟಿಹಳ್ಳಿ, ಆರ್.ಕೆ. ಚವ್ಹಾಣ, ನಾಗರಾಜ ಕುಲಕರ್ಣಿ, ಹಿರಿಯರಾದ ಎಂ.ಎಸ್. ಕರಿಗೌಡ್ರ, ಜಗನ್ನಾಥಸಾ ಭಾಂಡಗೆ, ಉಮೇಶಗೌಡ ಸಿ.ಪಾಟೀಲ, ಗದಗ ನಗರ ಮಂಡಲಲಾಧ್ಯಕ್ಷ ಸುರೇಶ ಮರಳಪ್ಪನವರ, ಗ್ರಾಮೀಣ ಅಧ್ಯಕ್ಷ ಬೂದಪ್ಪ ಹಳ್ಳಿ, ತೋಟೊಸಾ ಭಾಂಡಗೆ, ಬಿ.ಎಚ್. ಲದ್ವಾ, ಎಂ.ಎಂ ಹಿರೇಮಠ, ವಿಜಯಕುಮಾರ ಗಡ್ಡಿ, ಭೀಮಸಿಂಗ ರಾಠೋಡ, ಶ್ರೀಪತಿ ಉಡುಪಿ, ವಸಂತ ಮೇಟಿ, ಉಮೇಶ ಮಲ್ಲಾಪೂರ, ಹೆಮಗಿರಿಶ ಹಾವಿನಾಳ, ಸೋಮಶೇಕರ ಚರೇದ, ಮಹೇಶ ಮುಸ್ಕಿನಭಾವಿ, ನಾಗನಗೌಡ ತಿಮ್ಮನಗೌಡ್ರ, ಅಂದಪ್ಪ ಹಾರೂಗೇರಿ, ಅಶೋಕ ನವಲಗುಂದ, ರವಿ ದಂಡಿನ, ಚಂದ್ರು ತಡಸದ, ರಾಘವೇಂದ್ರ ಯಳವತ್ತಿ, ಮಂಜುನಾಥ ಮುಳಗುಂದ, ನಿರ್ಮಲಾ ಕೊಳ್ಳಿ, ವಿಜಯಲಕ್ಷ್ಮೀ ಮಾನ್ವಿ, ಸ್ವಾತಿ ಅಕ್ಕಿ, ಕವಿತಾ ಬಂಗಾರಿ, ಜಯಶ್ರೀ ಅಣ್ಣಿಗೇರಿ, ವಿಜಯಲಕ್ಷ್ಮೀ ಶಶಿಧರ ದಿಂಡೂರ, ಲಕ್ಷ್ಮೀ ಶಂಕರ ಕಾಕಿ, ಶಿವು ಹಿರೇಮನಿಪಾಟೀಲ, ಯೋಗೇಶ್ವರಿ ಭಾವಿಕಟ್ಟಿ, ಅಪ್ಪಣ್ಣ ಟೆಂಗಿನಕಾಯಿ ನಾಗರಾಜ ತಳವಾರ, ಬಸವರಾಜ ಇಟಗಿ, ರಮೇಶ ವಕ್ಕಾರ, ವಾಯ್.ಪಿ. ಅಡ್ನೂರ, ನಿಂಗಪ್ಪ ಮಣ್ಣೂರ, ಬಸವರಾಜ ಬಡಿಗೇರ, ರೇಖಾ ಬಂಗಾರಶೆಟ್ಟರ ಮುಂತಾದದವರು ಉಪಸ್ಥಿತರಿದ್ದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಎಸ್.ವ್ಹಿ. ಸಂಕನೂರ, ಅಲ್ಪಸಂಖ್ಯಾತರ ತುಷ್ಟೀಕರಣ ಮತ್ತು ಗುತ್ತಿಗೆಯಲ್ಲಿ ಅವರಿಗೆ ಮೀಸಲಾತಿ ನೀಡುವದು ಸಂವಿಧಾನಬದ್ಧವಾಗಿಲ್ಲ. ಸಂವಿಧಾನದಲ್ಲಿ ಧರ್ಮ ಆಧಾರಿತ ಮೀಸಲಾತಿಗೆ ಅವಕಾಶವಿಲ್ಲ ಎಂದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!