ವಿಜಯಸಾಕ್ಷಿ ಸುದ್ದಿ, ಗದಗ : ಸಂಗೀತ ಪರೀಕ್ಷಾ ಕೇಂದ್ರವನ್ನು ಗದಗದಿಂದ ಹುಬ್ಬಳ್ಳಿಗೆ ಸ್ಥಳಾಂತರ ಮಾಡಿರುವುದು ಖಂಡನೀಯ ಎಂದು ಹಿರಿಯ ಮುಖಂಡರಾದ ಮುರಿಗೆಪ್ಪ ಶೆಟ್ಟರ್ ಅಭಿಪ್ರಾಯಪಟ್ಟಿದ್ದಾರೆ.
Advertisement
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಅಂಧ, ಅನಾಥ ಮಕ್ಕಳಿಗೆ ನಂದಾದೀಪವಾಗಿರುವ ಶ್ರೀ ವೀರೇಶ್ವರ ಪುಣ್ಯಾಶ್ರಮದ ಅಂಧ ಮಕ್ಕಳಿಗೆ ಅನುಕೂಲವಾಗುವಂತೆ ಈ ಪರೀಕ್ಷೆಯನ್ನು ಗದುಗಿನಲ್ಲಿಯೇ ನಡೆಸಬೇಕು. ಈ ಪುಣ್ಯಾಶ್ರಮವು ಸಂಗೀತ ಕಾಶಿ ಎನಿಸಿಕೊಂಡಿದೆ. ಪರೀಕ್ಷಾ ಕೇಂದ್ರವನ್ನು ಗದಗ ಜಿಲ್ಲಾ ಕೇಂದ್ರದಿಂದ ಹುಬ್ಬಳ್ಳಿಗೆ ಸ್ಥಳಾಂತರ ಮಾಡಿರುವುದರಿಂದ ಅಂಧ, ಅನಾಥ, ಬಡ ಮಕ್ಕಳಿಗೆ ತೊಂದರೆಯಾಗಲಿದೆ ಎಂದು ತಿಳಿಸಿದ್ದಾರೆ.