ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ತೋಂಟದ ಸಿದ್ಧೇಶ್ವರ ವಿಜ್ಞಾನ, ವಾಣಿಜ್ಯ ಹಾಗೂ ಕಲಾ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ಸಂತೋಷ ಕೋಟೆಣ್ಣವರ (ಶೇ.90) ಪ್ರಥಮ, ರಂಜಿತಾ ಸುಣಗಾರ (ಶೇ.89) ದ್ವಿತೀಯ, ಭೂಮಿಕಾ ಕಬಾಡರ (ಶೇ.84) ತೃತೀಯ ಸ್ಥಾನ ಗಳಿಸಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಅಂಜಲಿ ಹಾವನೂರ (ಶೇ.92) ಪ್ರಥಮ, ಯಲ್ಲವ್ವ ಗಾಜಿ (ಶೇ.83) ದ್ವಿತೀಯ, ಪಲ್ಲವಿ ಮುಧೋಳ ಮತ್ತು ಅಮೀರಹುಸೇನ ಮುಲ್ಲಾ (ಶೇ.77) ತೃತೀಯ ಸ್ಥಾನ ಪಡೆದಿದ್ದಾರೆ.
ಕಲಾ ವಿಭಾಗದಲ್ಲಿ ರಜಿಯಾಬೇಗಂ (ಶೇ.86) ಪ್ರಥಮ, ಯಲ್ಲಪ್ಪ ಬಡಪ್ಪನವರ (ಶೇ.84) ದ್ವಿತೀಯ, ಅಪ್ಸಾನಾ ಹಾಳಕೇರಿ (ಶೇ.82% ತೃತೀಯ ಸ್ಥಾನ ಪಡೆದಿದ್ದಾರೆ.
ಸಾಧನೆಗೈದ ಎಲ್ಲ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರಾದ ಪೂಜ್ಯ ಡಾ.ತೋಂಟದ ಸಿದ್ಧರಾಮ ಮಹಾಸ್ವಾಮಿಗಳು, ಸಂಸ್ಥೆಯ ಕಾರ್ಯದರ್ಶಿ ಪ್ರೊ. ಶಿವಾನಂದ ಪಟ್ಟಣಶೆಟ್ಟರ, ಪ್ರಾಚಾರ್ಯ ವಾಯ್.ಎಸ್. ಮತ್ತೂರ, ತೋಂಟದಾರ್ಯ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಕೊಟ್ರೇಶ ಮೆಣಸಿನಕಾಯಿ ಹಾಗೂ ಕಾಲೇಜಿನ ಆಡಳಿತ ಮಂಡಳಿ, ಆಧ್ಯಾಪಕ ವೃಂದದವರು ಹಾರ್ದಿಕ ಅಭಿನಂದನೆ ಸಲ್ಲಿಸಿದ್ದಾರೆ.