ರೇಣುಕಾ ಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

0
Spread the love

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗಿ 110 ಕ್ಕೂ ಹೆಚ್ಚು ದಿನಗಳಾಗಿವೆ. ಜಾಮೀನಿಗೆ ಅರ್ಜಿ ಹಾಕಿರೋ ಆರೋಪಿ ದರ್ಶನ್‌ಗೆ ಇಂದು ಮಹತ್ವದ ದಿನವಾಗಿತ್ತು. ನಟ ದರ್ಶನ್ ಮತ್ತು ಪವಿತ್ರಾ ಗೌಡ ಅವರ ಜಾಮೀನು ಅರ್ಜಿಗಳ ವಿಚಾರಣೆಯನ್ನು ಮುಂದೂಡಲಾಗಿದೆ. ದರ್ಶನ್ ಅವರ ಅರ್ಜಿಯನ್ನು ಸೆಪ್ಟೆಂಬರ್ 27ಕ್ಕೆ ಮತ್ತು ಪವಿತ್ರಾ ಗೌಡ ಅವರ ಅರ್ಜಿಯನ್ನು ಸೆಪ್ಟೆಂಬರ್ 25ಕ್ಕೆ ಮುಂದೂಡಲಾಗಿದೆ.

Advertisement

ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಅವರು ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಬೆಂಗಳೂರಿನ 57ನೇ ಸಿಟಿ ಸಿವಿಲ್ ನ್ಯಾಯಾಲಯ  ಕಾಮಾಕ್ಷಿಪಾಳ್ಯ ಠಾಣೆಯ ತನಿಖಾಧಿಕಾರಿಗಳು  ಆಕ್ಷೇಪಣೆ ಸಲ್ಲಿಕೆಗೆ ಕಾಲಾವಕಾಶ ಕೋರಿದ್ದರಿಂದ ಮುಂದಿನ ವಿಚಾರಣೆಯನ್ನು ಸೆ.27 ಕ್ಕೆ   ಮುಂದೂಡಿಕೆ ಮಾಡಿದೆ.

ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಇದೇ ತಿಂಗಳು ಸೆಪ್ಟೆಂಬರ್ 27ಕ್ಕೆ ಮುಂದೂಡಿಕೆ ಮಾಡಲಾಗಿದೆ. ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್​ ಅವರಿಗೆ ಜಾಮೀನಿನ ಟೆನ್ಷನ್​  ಹೆಚ್ಚಿದೆ. ಆಕ್ಷೇಪಣೆ ಸಲ್ಲಿಕೆ ಮಾಡಲು  ಎಸ್ ಪಿಪಿ ಕಾಲಾವಕಾಶ ಕೇಳಿದ ಹಿನ್ನಲೆ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿಕೆ ಮಾಡಲಾಗಿದೆ.

 


Spread the love

LEAVE A REPLY

Please enter your comment!
Please enter your name here