ರೇಣುಕಾಸ್ವಾಮಿ ಕೇಸ್: ಸುಪ್ರೀಂ ನಿರ್ಧಾರದ ಮೇಲೆ ದರ್ಶನ್ ಜಾಮೀನು ಭವಿಷ್ಯ

0
Spread the love

ನಟ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಪಾಲಿಗೆ ಇಂದು ಬಿಗ್​ಡೇಯಾಗಿದೆ. ಬರೀ ದರ್ಶನ್ ಮಾತ್ರವಲ್ಲ, ದರ್ಶನ್ ಗೆಳತಿ ಪವಿತ್ರಾ ಗೌಡ ಸೇರಿದಂತೆ 7 ಆರೋಪಿಗಳಿಗೂ ಮಹತ್ವದ ದಿನವಾಗಿದೆ. ರೇಣುಕಾಸ್ವಾಮಿ ಕೇಸ್‌ನಲ್ಲಿ ನಟ ದರ್ಶನ್, ಪವಿತ್ರಾಗೌಡ ಹಾಗೂ ಇತರೆ ಆರೋಪಿಗಳ ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್​ ಮೆಟ್ಟಿಲೇರಿದೆ.

Advertisement

ಹೈಕೋರ್ಟ್ ನೀಡಿರುವ ಜಾಮೀನು ರದ್ದಾಗುತ್ತಾ ಅಥವಾ ಮುಂದುವರೆಯುತ್ತಾ ಎಂಬುದು ಇವತ್ತು ತೀರ್ಮಾನ ಆಗುವ ಸಾಧ್ಯತೆ ಇದೆ. ಹೀಗಾಗಿ ಎಲ್ಲರ ಚಿತ್ತ ಇದೀಗ ಸುಪ್ರೀಂಕೋರ್ಟ್​ನತ್ತ ನೆಟ್ಟಿದೆ.

ಸುಪ್ರೀಂಕೋರ್ಟ್​ನ ನ್ಯಾಯಮೂರ್ತಿ ಜೆಬಿ ಪಾರ್ದಿವಾಲಾ ಹಾಗೂ ನ್ಯಾಯಮೂರ್ತಿ ಮಹದೇವನ್ ನೇತೃತ್ವದ ದ್ವಿಸದಸ್ಯ ಪೀಠವು ಇವತ್ತು ವಿಚಾರಣೆ ಮುಂದುವರಿಸಲಿದೆ. ಈಗಾಗಲೇ ಸರ್ಕಾರಿ ಪರ ವಕೀಲರ ವಾದ ಮುಗಿದಿದ್ದು,

ದರ್ಶನ್ ಪರ ಖ್ಯಾತ ವಕೀಲ ಕಪಿಲ್ ಸಿಬಲ್ ಇವತ್ತು ವಾದ ಮಂಡಿಸಲಿದ್ದಾರೆ. ಕಪಿಲ್​ ಸಿಬಲ್​ ಅವರ ವಾದವನ್ನು ಆಲಿಸಿ ಸುಪ್ರೀಂಕೋರ್ಟ್​ ಬಹುತೇಕ ಇವತ್ತೇ ತನ್ನ ತೀರ್ಪು ಪ್ರಕಟಿಸುವ ಸಾಧ್ಯತೆ ಇದ್ದು ದರ್ಶನ್​ಗೆ ಟೆನ್ಷನ್​ ಹೆಚ್ಚಿಸಿದೆ. ನಟ ಥಾಯ್ಲೆಂಡ್‌ನಲ್ಲಿ ಡೆವಿಲ್ ಸಿನಿಮಾ ಶೂಟಿಂಗ್‌ ಮಾಡುತ್ತಾ ಜಾಲಿ ಮೂಡ್‌ನಲ್ಲಿದ್ದ ದರ್ಶನ್‌ಗೆ ಬೇಲ್ ರದ್ದಾಗುವ ಭೀತಿ ಆವರಿಸಿದೆ.

 


Spread the love

LEAVE A REPLY

Please enter your comment!
Please enter your name here