ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಬಂದಿರುವ ನಟ ದರ್ಶನ್ ಅವರು ಇನ್ನೂ ಕೆಲವೇ ದಿನಗಳಲ್ಲಿ ವಿದೇಶಕ್ಕೆ ಹಾರಲಿದ್ದಾರೆ. ಜಾಮೀನು ಸಿಕ್ಕು ಜೈಲಿನಿಂದ ಬಂದ ನಂತರ, ಚಿತ್ರೀಕರಣಕ್ಕಾಗಿ ವಿದೇಶಕ್ಕೆ ತೆರಳಲು ನಟ ದರ್ಶನ್ ಅನುಮತಿ ಕೇಳಿದ್ದರು. ಅವರಿಗೆ ಈಗ ಅನುಮತಿ ಸಿಕ್ಕಿದೆ. ಹಾಗಾಗಿ ಸದ್ಯದಲ್ಲೇ ವಿದೇಶ ವಿಮಾನ ಏರಲು ದರ್ಶನ್ ಸಜ್ಜಾಗಿದ್ದಾರೆ.
ದರ್ಶನ್ ನಟನೆಯ ಡೆವಿಲ್ ಸಿನಿಮಾದ ಚಿತ್ರೀಕರಣ ಸದ್ಯ ಬೆಂಗಳೂರಿನಲ್ಲಿ ನಡೆಯುತ್ತಿದೆ. ಸಾಹಸ ಸನ್ನಿವೇಶಗಳನ್ನು ನಿರ್ದೇಶಕರು ಸೆರೆ ಹಿಡಿಯುತ್ತಿದ್ದಾರೆ. ಈ ವಾರದಲ್ಲಿ ಬಹುತೇಕ ಸಾಹಸ ಸನ್ನಿವೇಶಗಳ ಶೂಟಿಂಗ್ ಮುಗಿಯಲಿದೆಯಂತೆ. ಚಿತ್ರೀಕರಣ ಮುಗಿಯುತ್ತಿದ್ದಂತೆಯೇ ಇಡೀ ಟೀಮ್ ವಿದೇಶಕ್ಕೆ ಹಾರಲಿದೆ. ವಿದೇಶದಲ್ಲಿ ಹಾಡಿನ ಶೂಟಿಂಗ್ ಗೆ ನಿರ್ದೇಶಕ ಪ್ರಕಾಶ್ ಪ್ಲ್ಯಾನ್ ಮಾಡಿದ್ದಾರಂತೆ.
ಜುಲೈ 1 ರಿಂದ ಜುಲೈ 28ರ ವರೆಗೂ ದರ್ಶನ್ ಅವರಿಗೆ ಕೋರ್ಟ್ ನಿಂದ ವಿದೇಶಕ್ಕೆ ಹೋಗಲು ಅನುಮತಿ ಸಿಕ್ಕಿದೆ. ಹಾಗಾಗಿ ಜುಲೈ ಮೊದಲ ವಾರದಲ್ಲೇ ಅವರು ವಿದೇಶಕ್ಕೆ ಹಾರಲಿದ್ದಾರೆ ಎನ್ನುವ ಮಾಹಿತಿ ಇದೆ.