ರೇಣುಕಾಸ್ವಾಮಿ ಕೊಲೆ ಕೇಸ್: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

0
Spread the love

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲು ಸೇರಿದ್ದ ನಟ ದರ್ಶನ್ ಮಧ್ಯಂತರ ಜಾಮೀನು ಪಡೆದು ಹೊರಗೆ ಬಂದಿದ್ದಾರೆ. ಅನಾರೋಗ್ಯದ ಕಾರಣದಿಂದ ಜಾಮೀನು ಪಡೆದಿರುವ ದಾಸ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಲಾಗಿದೆ.

Advertisement

A1 ಆರೋಪಿ ಪವಿತ್ರಾಗೌಡ, A2 ನಟ ದರ್ಶನ್, ನಾಗರಾಜ್, ಲಕ್ಷ್ಮಣ್, ಅನುಕುಮಾರ್ ಮತ್ತು ಜಗದೀಶ್ ಅವರ ಜಾಮೀನು ಅರ್ಜಿ ವಿಚಾರಣೆ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರ ಪೀಠದಲ್ಲಿ ನಡೆಯಿತು. ಇದೀಗ ಬೇಲ್​ ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿ ಕೋರ್ಟ್​ ಆದೇಶ ಹೊರಡಿಸಿದೆ. ದರ್ಶನ್​​ ಪರ ವಕೀಲ ಸಿ.ವಿ ನಾಗೇಶ್ ಸುದಿರ್ಘ ವಾದ ಮಂಡಿಸಿದರು. ವಾದ ಆಲಿಸಿದ ಹೈಕೋರ್ಟ್, ಬೇಲ್​ ಅರ್ಜಿಯನ್ನು ಮುಂದೂಡಿದೆ.

 


Spread the love

LEAVE A REPLY

Please enter your comment!
Please enter your name here