ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ ಬಂಧನ ಅವಧಿ ಮತ್ತೆ ಒಂದು ದಿನ ವಿಸ್ತರಣೆ

0
Spread the love

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಕೇಸ್​ನ 2ನೇ ಆರೋಪಿ ನಟ ದರ್ಶನ್​​​​ ಬಳ್ಳಾರಿ ಜೈಲಿನಲ್ಲಿದ್ದು ಇಂದು ಪತ್ನಿ ವಿಜಯಲಕ್ಷ್ಮಿ ಜೈಲಿಗೆ ಭೇಟಿ ಕೊಟ್ಟರು. ಇನ್ನೂ ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಕೇಸ್​​ಗೆ ಸಂಬಂಧ ಇಂದು ದರ್ಶನ್​​ರನ್ನು ಕೋರ್ಟ್​ ವಿಚಾರಣೆ ನಡೆಸಿದೆ. 24ನೇ ಎಸಿಎಂಎಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯಿತು. ನಟ ದರ್ಶನ್ ಪರ ವಕೀಲ ಶಿವಕುಮಾರ್ ಹಾಜರಾಗಿದ್ದರು.

Advertisement

ಈ ವೇಳೆ ಕಮಿಟಲ್ ಆದೇಶಕ್ಕೆ ಆರೋಪಿಗಳ ಪರ ವಕೀಲರ ಆಕ್ಷೇಪ ವ್ಯಕ್ತಪಡಿಸಿದರು. ಟೆಕ್ನಿಕಲ್‌ ಎವಿಡೆನ್ಸ್‌ಗಳನ್ನು ಆರೋಪಿಗಳಿಗೆ ಕೊಟ್ಟ ನಂತರ ಕಮಿಟಲ್ ಮಾಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದರು. ಆರೋಪಿಗಳ ಪರ ವಕೀಲರ ಅಬ್ಜೆಕ್ಷನ್ ಹಿನ್ನೆಲೆಯಲ್ಲಿ ದರ್ಶನ್ ಸೇರಿ ಎಲ್ಲಾ ಆರೋಪಿಗಳಿಗೆ ಒಂದು ದಿನದ ನ್ಯಾಯಾಂಗ ಬಂಧನ ವಿಸ್ತರಣೆ ಆಗಿದ್ದು, ನಾಳೆ ಶುಕ್ರವಾರಕ್ಕೆ ವಿಚಾರಣೆ ಮುಂದೂಡಿಕೆ ಆಗಿದೆ.

ಇದೇ ವೇಳೆ ಕೊಲೆ ಪ್ರಕರಣವನ್ನು ಸೆಷನ್ಸ್ ಕೋರ್ಟ್‌ಗೆ ವರ್ಗಾವಣೆ ಮಾಡುವುದಾಗಿ ನ್ಯಾಯಾಧೀಶರು ಹೇಳಿದರು. ಈ ವೇಳೆ ಡಿಜಿಟಲ್ ಎವಿಡೆನ್ಸ್ ನೀಡಿದ ಬಳಿಕ ಸೆಷನ್ಸ್‌ ಕೋರ್ಟ್‌ಗೆ ವರ್ಗಾವಣೆ ಮಾಡುವಂತೆ ಆರೋಪಿ ಪರ ವಕೀಲ ಮನವಿ ಮಾಡಿದರು. ಈ ವೇಳೆ ಡಿಜಿಟಲ್ ಎವಿಡೆನ್ಸ್ ನೀಡಲು ಒಂದು ವಾರ ಸಮಯ ಬೇಕಾಗುತ್ತೆ ಎಂದು ಎಸ್‌ಪಿಪಿ ವಾದಿಸಿದರು. ವಿಚಾರಣೆ ನಾಳೆಗೆ ಮುಂದೂಡಿಕೆ ಆಗಿದೆ.


Spread the love

LEAVE A REPLY

Please enter your comment!
Please enter your name here