ರೇಣುಕಾಸ್ವಾಮಿ ಕೊಲೆ ಕೇಸ್: ಎ1 ಆರೋಪಿ ಪವಿತ್ರಾಗೌಡ ಜಾಮೀನು ಅರ್ಜಿ ವಜಾ

0
Spread the love

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೆ ಜೈಲುಪಾಲಾಗಿರುವ ಎ1 ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿಯನ್ನು 57ನೇ ಸೆಷನ್ಸ್ ಕೋರ್ಟ್ ವಜಾಗೊಳಿಸಿದೆ. ಇತ್ತೀಚೆಗಷ್ಟೆ ಪ್ರಕರಣದ ನಂಬರ್ 1 ಆರೋಪಿ ಪವಿತ್ರಾ ಗೌಡ ಜಾಮೀನು ಕೋರಿ ಅರ್ಜಿ ಹಾಕಿದ್ದರು ಆದರೆ ಅರ್ಜಿ ವಜಾ ಆಗಿದೆ.

Advertisement

ಕೆಳ ಹಂತದ ನ್ಯಾಯಾಲಯದಲ್ಲಿ ಪವಿತ್ರಾ ಗೌಡ ಅವರು ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದರು. ತಮ್ಮಿಂದ ರೇಣುಕಾ ಸ್ವಾಮಿ ನಿಧನ ಹೊಂದಿಲ್ಲ ಎಂಬುದನ್ನೂ ಸೇರಿದಂತೆ, ತಾನು ಮಹಿಳೆ ಹಾಗೂ ಸಿಂಗಲ್ ಮದರ್ ಆಗಿದ್ದು ಮಗಳ ಆರೈಕೆ ಮಾಡಬೇಕು ಇನ್ನಿತರೆ ಕಾರಣಗಳನ್ನು ಪವಿತ್ರಾ ಗೌಡ ನೀಡಿದ್ದರು. ಆದರೆ ಯಾವುದೇ ಕಾರಣವನ್ನು ನ್ಯಾಯಾಲಯ ಪರಿಗಣಿಸಿಲ್ಲ. ಪವಿತ್ರಾ ಅವರ ಜಾಮೀನು ಅರ್ಜಿಯನ್ನು ಕೆಳಹಂತದ ನ್ಯಾಯಾಲಯ ರದ್ದು ಮಾಡಿದೆ.

ಪವಿತ್ರಾ ಗೌಡ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ 57ನೇ ಸೆಷನ್ಸ್​ ನ್ಯಾಯಾಲಯದಲ್ಲಿ ನಡೆದಿತ್ತು, ನ್ಯಾಯಾಧೀಶ ಐಪಿ ನಾಯಕ್ ಅವರು ವಿಚಾರಣೆ ನಡೆಸಿ ಅರ್ಜಿಯನ್ನು ವಜಾ ಮಾಡಿದ್ದಾರೆ. ಪವಿತ್ರಾ ಗೌಡ ಅವರು ಇದೀಗ ಹೈಕೋರ್ಟ್​​ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ.


Spread the love

LEAVE A REPLY

Please enter your comment!
Please enter your name here