ರೇಣುಕಾಸ್ವಾಮಿ ಕೊಲೆ ಕೇಸ್‌: ನಟ ದರ್ಶನ್‌ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆ

0
Spread the love

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ʼನಲ್ಲಿ ಅರೆಸ್ಟ್ ಆಗಿರುವ ಆರೋಪಿ ದರ್ಶನ್‌ ಅವರ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಿಸಲಾಗಿದೆ. ಹೌದು ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ವಿಶ್ವನಾಥ ಸಿ ಗೌಡರ್ ಅವರು ದರ್ಶನ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಆ. 1ರವರೆಗೆ ವಿಸ್ತರಿಸಿ ಆದೇಶ ನೀಡಿದ್ದಾರೆ. ಜೂ. 18ರಂದು ನಡೆದ ವಿಚಾರಣೆಯಲ್ಲಿ ಈ ಆದೇಶ ಹೊರಬಿದ್ದಿದೆ.

Advertisement

ಈ ಪ್ರಕರಣದ ಅರ್ಜಿಯ ವಿಚಾರಣೆ ನಡೆಸಿದಂತ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ನ ನ್ಯಾಯಾಧೀಶರು ನಟ ದರ್ಶನ್ ಅಂಡ್ ಗ್ಯಾಂಗ್ ಗೆ ನ್ಯಾಯಾಂಗ ಬಂಧನದ ಅಧಿಯನ್ನು ಮತ್ತೆ 14 ದಿನಗಳ ಕಾಲ ವಿಸ್ತರಣೆ ಮಾಡಿ ಆದೇಶಿಸಿದೆ. ಅಂದರೇ ಆಗಸ್ಟ್.1ರವರೆಗೆ ನ್ಯಾಯಾಂಗ ಬಂಧವನ್ನು ವಿಸ್ತರಿಸಿ ಆದೇಶಿಸಿದೆ.

 


Spread the love

LEAVE A REPLY

Please enter your comment!
Please enter your name here