HomeEntertainmentರೇಣುಕಾಸ್ವಾಮಿ ಕೊಲೆ ಪ್ರಕರಣ: ಇಂದು ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಇಂದು ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ

For Dai;y Updates Join Our whatsapp Group

Spread the love

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಎ1 ಆರೋಪಿಯಾಗಿರುವ ನಟಿ ಪವಿತ್ರಾ ಗೌಡ ಕಳೆದ ಐದು ತಿಂಗಳಿನಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ. ಈಗಾಗಲೇ ಹಲವು ಭಾರೀ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು ಬಿಡುಗಡೆ ಭಾಗ್ಯ ಮಾತ್ರ ಸಿಕ್ಕಿಲ್ಲ. ಇಂದು ಮತ್ತೆ ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ನಡೆಯಲಿದ್ದು ಇಂದಾದ್ರು ಹೊರ ಬರ್ತಾರಾ ಎಂಬ ಕುತೂಹಲ ಮನೆ ಮಾಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದ್ದು, ಬೇಲ್​ ಸಿಗುವ ಭರವಸೆಯಲ್ಲಿದ್ದಾರೆ ಪವಿತ್ರಾ ಗೌಡ.

ನ್ಯಾ. ಎಸ್. ವಿಶ್ವಜಿತ್ ಶೆಟ್ಟಿ ಅವರಿರುವ ಹೈಕೋರ್ಟ್ ಪೀಠದಲ್ಲಿ ವಿಚಾರಣೆ ನಡೆಯಲಿದೆ. ದರ್ಶನ್, ಪವಿತ್ರಾ ಗೌಡ, ಆರ್. ನಾಗರಾಜು, ಅನುಕುಮಾರ್, ಎಂ. ಲಕ್ಷ್ಮಣ್, ಜಗದೀಶ್ ಅವರ ಜಾಮೀನು ಅರ್ಜಿ ವಿಚಾರಣೆ ಮಾಡಲಾಗುವುದು. ಅನಾರೋಗ್ಯ ಕಾರಣಕ್ಕೆ ಮಧ್ಯಂತರ ಜಾಮೀನು ಪಡೆದಿರುವ ದರ್ಶನ್ ಈವರೆಗೂ ಸರ್ಜರಿ ಮಾಡಿಸಿಲ್ಲ. ಆ ಬಗ್ಗೆ ಅವರು ನ್ಯಾಯಾಲಯಕ್ಕೆ ಪ್ರತಿಕ್ರಿಯಿಸಬೇಕಿದೆ.

ಇನ್ನೂ ಯಾಕೆ ಸರ್ಜರಿ ಮಾಡಿಸಿಲ್ಲ, ಬೆನ್ನು ನೋವಿಗೆ ಚಿಕಿತ್ಸೆ ಯಾವ ಹಂತದಲ್ಲಿದೆ ಎಂಬಿತ್ಯಾದಿ ವಿಚಾರಗಳ ಬಗ್ಗೆ ದರ್ಶನ್ ಪರ ವಕೀಲರು ಹೈಕೋರ್ಟ್​ಗೆ ಇಂದು ಪ್ರತಿಕ್ರಿಯೆ ನೀಡುವ ಸಾಧ್ಯತೆ ಇದೆ. ಬಳ್ಳಾರಿ ಜೈಲಿನಲ್ಲಿ ಇದ್ದಾಗ ದರ್ಶನ್​ಗೆ ತೀವ್ರ ಬೆನ್ನು ನೋವು ಕಾಣಿಸಿಕೊಂಡಿತ್ತು. ಹಾಗಾಗಿ ಜಾಮೀನು ಪಡೆದು ಅವರು ಬೆಂಗಳೂರಿಗೆ ಬಂದಿದ್ದು, ಕೆಂಗೇರಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ದರ್ಶನ್ ಗೆ ಆರು ವಾರಗಳ ಮಧ್ಯಂತರ ಜಾಮೀನು ಅರ್ಜಿ ಮಂಜೂರು ಮಾಡಲಾಗಿದ್ದು ಅದರಲ್ಲಿ ನಾಲ್ಕು ವಾರಗಳು ಮುಗಿದೇ ಹೋಗಿದೆ. ಹೀಗಾಗಿ ದರ್ಶನ್ ಮುಂದಿನ ನಡೆ ಏನು ಎಂಬ ಕುತೂಹಲ ಶುರುವಾಗಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದ 17 ಆರೋಪಿಗಳಲ್ಲಿ ಕೆಲವರೀಗೆ ಮಾತ್ರ ಜಾಮೀನು ಸಿಕ್ಕಿದೆ. ಪವನ್, ನಂದೀಶ್​ ಅವರ ಜಾಮೀನು ಅರ್ಜಿ ನ.20ರಂದು ವಜಾ ಆಗಿದೆ. ಜಾಮೀನು ಅರ್ಜಿ ವಜಾಗೊಳಿಸಿ ಬೆಂಗಳೂರಿನ ಸಿಸಿಹೆಚ್ 57ರ ಜಡ್ಜ್ ಜೈಶಂಕರ್ ಆದೇಶ ನೀಡಿದ್ದಾರೆ. ಧನರಾಜ್ ಜಾಮೀನು ಅರ್ಜಿ ಬಗ್ಗೆ ಇಂದು ಆದೇಶ ಪ್ರಕಟ ಆಗಲಿದೆ.

 


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!