ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಎ1 ಆರೋಪಿ ಆಗಿರುವ ನಟಿ ಪವಿತ್ರಾ ಗೌಡಗೆ ಕೋರ್ಟ್ ಶಾಕ್ ನೀಡಿದ್ದು, ಜಾಮೀನು ಅರ್ಜಿ ವಜಾ ಮಾಡಿದೆ.
ಮಹಿಳೆ ಎನ್ನುವ ಅಂಶವನ್ನು ಮುಂದಿಟ್ಟುಕೊಂಡು ಪವಿತ್ರಾ ಗೌಡ ಜಾಮೀನು ಪಡೆಯುವ ನಿರೀಕ್ಷೆಯಲ್ಲಿದ್ದರು. ಆದರೆ ಕೋರ್ಟ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದು ಪವಿತ್ರಾ ಗೌಡಗೆ ನಿರಾಸೆಯಾಗಿದೆ.
ವಾದವನ್ನು ಆಲಿಸಿದ ಬಳಿಕ ನ್ಯಾಯಾಲಯ ಪವಿತ್ರಾ ಗೌಡಗೆ ಜಾಮೀನು ನೀಡಲು ನಿರಾಕರಿಸಿದ್ದು, ಅದಕ್ಕೆ ಕಾರಣಗಳನ್ನು ಕೊಟ್ಟಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣ ಭೀಕರ ಮತ್ತು ಘೋರವಾಗಿದೆ. ರೇಣುಕಾಸ್ವಾಮಿಗೆ ಚಿತ್ರ ಹಿಂಸೆ ಕೊಟ್ಟು ಕೊಲೆ ಮಾಡಲಾಗಿದೆ. ಇಬ್ಬರು ಪ್ರತ್ಯಕ್ಷದರ್ಶಿಗಳು ಪವಿತ್ರಾ ಗೌಡರನ್ನು ಗುರುತಿಸಿದ್ದಾರೆ.
ಆರೋಪಿಗಳ ಬಟ್ಟೆಯಲ್ಲಿ ಡಿಎನ್ಎ ಪತ್ತೆಯಾಗಿದೆ. ಕೃತ್ಯ ನಡೆಸಲು ಬಳಸಿದ ಕಾರು ಸಿಸಿಟಿವಿಯಲ್ಲಿ ಪತ್ತೆಯಾಗಿದೆ. ಎಲ್ಲಾ ಸಾಕ್ಷಿಗಳು ಆರೋಪಿಗಳ ವಿರುದ್ಧವಾಗಿದ್ದು ಇದೊಂದು ಗಂಭೀರ ಪ್ರಕರಣವಾಗಿರುವ ಕಾರಣ ಜಾಮೀನು ಕೊಡಲು ಸಾಧ್ಯವಿಲ್ಲ ಎಂದು ಹೇಳಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 9ರವರೆಗೂ ವಿಸ್ತರಣೆ ಮಾಡಿದೆ.