ರೇಣುಕಾಸ್ವಾಮಿ ಪತ್ನಿಗೆ ಗಂಡು ಮಗು ಜನನ: ಮನೆಯಲ್ಲಿ ಸಂತಸದ ವಾತವರಣ!

0
Spread the love

ಕನ್ನಡ ಚಿತ್ರರಂಗದ ನಟ ದರ್ಶನ್ ಗ್ಯಾಂಗ್ ನಿಂದ ಬರ್ಬರವಾಗಿ ಕೊಲೆಯಾಗಿದ್ದ ರೇಣುಕಾಸ್ವಾಮಿ ಮನೆಯಲ್ಲಿ ಈಗ ಖುಷಿಯ ವಾತಾವರಣ ಇದೆ. ರೇಣುಕಾಸ್ವಾಮಿ ಪತ್ನಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

Advertisement

ಇಂದು ಬೆಳಗ್ಗೆ ಜಾವ 7ಗಂಟೆ 1 ನಿಮಿಷಕ್ಕೆ ನಗರದ ಕೀರ್ತಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಸಹನಾ ಜನ್ಮ ಕೊಟ್ಟಿದ್ದಾರೆ.

ರೇಣುಕಾ ಸ್ವಾಮಿ ಕೊಲೆಯ ಬಳಿಕ ಇಡೀ ಕುಟುಂಬ ಕಣ್ಣೀರಲ್ಲೇ ಕೈ ತೊಳೆಯುತ್ತಾ ಬಂದಿದೆ. ‘ಮಗ ಕೈ ಮುಗಿದು ಕೇಳಿಕೊಂಡಾಗ ಅವರು ಬಿಟ್ಟುಬಿಡಬೇಕಿತ್ತು’ ಎಂದು ತಂದೆ-ತಾಯಿ ಕಣ್ಣೀರು ಹಾಕಿದ್ದರು. ಅಲ್ಲದೆ, ದರ್ಶನ್​ಗೆ ಒಳ್ಳೆಯದಾಗಲ್ಲ ಎಂದು ಶಾಪ ಕೂಡ ಹಾಕಿದ್ದರು. ಈಗ ನೊಂದಿದ್ದ ಕುಟುಂಬಕ್ಕೆ ಖುಷಿ ಆಗುವಂಥ ಸುದ್ದಿ ಸಿಕ್ಕಿದೆ.

ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್ ಅರೆಸ್ಟ್ ಆದರು. ಜೂನ್ 11ರಂದು ದರ್ಶನ್ ಬಂಧನ ನಡೆದಿದೆ. ಅವರು ಕಳೆದ ನಾಲ್ಕು ತಿಂಗಳಿಂದ ಜೈಲಿನಲ್ಲಿಯೇ ಇದ್ದಾರೆ. ಅವರು ಜಾಮೀನಿಗೆ ಅರ್ಜಿ ಹಾಕಿದ್ದರು.

ಆದರೆ, ಕೆಳ ಹಂತದ ಕೋರ್ಟ್ ಈ ಅರ್ಜಿಯನ್ನು ತಿರಸ್ಕರಿಸಿದೆ. ಇದೀಗ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲು ದರ್ಶನ್ ಪರ ವಕೀಲರು ಮುಂದಾಗಿದ್ದಾರೆ.


Spread the love

LEAVE A REPLY

Please enter your comment!
Please enter your name here