ನಿಖಿಲ್ ಕುಮಾರಸ್ವಾಮಿ ಪರ ಮತ ಯಾಚನೆ

0
Requesting votes for Nikhil Kumaraswamy
Spread the love

ವಿಜಯಸಾಕ್ಷಿ ಸುದ್ದಿ, ಚನ್ನಪಟ್ಟಣ : ರಾಜ್ಯದಲ್ಲಿ ನಡೆಯಲಿರುವ ಉಪಚುನಾವಣೆಯಲ್ಲಿ ನಿಖಿಲ ಕುಮಾರಸ್ವಾಮಿ ಗೆಲುವು ಸಾಧಿಸಲಿದ್ದಾರೆ ಎಂದು ಜೆಡಿಎಸ್ ಪಕ್ಷದ ರಾಜ್ಯ ವಕ್ತಾರ ವೆಂಕನಗೌಡ ಆರ್.ಗೋವಿಂದಗೌಡ್ರ ಹೇಳಿದರು.

Advertisement

ಅವರು ನಿಖಿಲ್ ಕುಮಾರಸ್ವಾಮಿ ಅವರ ಪರ ಚನ್ನಪಟ್ಟಣ ಮತಕ್ಷೇತ್ರದಲ್ಲಿ ಚುನಾವಣೆ ಪ್ರಚಾರದಲ್ಲಿ ಪಾಲ್ಗೊಂಡು ಮತ ಯಾಚನೆ ಮಾಡಿ, ಕಾಂಗ್ರೆಸ್ ಪಕ್ಷದ ಸುಳ್ಳುಗಳಿಗೆ ಈ ಹಿಂದೆ ಮೋಸ ಹೋದಂತೆ ಮತ್ತೆ ಮೋಸಕ್ಕೆ ಒಳಗಾಗಬಾರದೆಂದು ಜನತೆಗೆ ಮನವಿ ಮಾಡಿಕೊಂಡರು.

ಈ ಸಂದರ್ಭದಲ್ಲಿ ಶರಣಪ್ಪ ಹೂಗಾರ, ಬಸವರಾಜ ಅಪ್ಪನವರ, ಪ್ರಫುಲ್ ಪುಣೆಕರ್, ಗಿರೀಶ್ ಸಂಶಿ, ಜೋಸೆಫ್ ಉದೋಜಿ, ಪುಲಿಕೇಶಿ ಗಾಳಿ, ಮಂಜುಳಾ ಮೇಟಿ, ಹಾಗೂ ಗದಗ ಜಿಲ್ಲೆಯ ನೂರಾರು ಕಾರ್ಯಕರ್ತರು ನಿಖಿಲ್ ಕುಮಾರಸ್ವಾಮಿಯವರ ಪರವಾಗಿ ಮತಯಾಚನೆ ಮಾಡಿದರು.


Spread the love

LEAVE A REPLY

Please enter your comment!
Please enter your name here