HomeIndia Newsಯುವಜನರ ಧ್ವನಿಯನ್ನು ಗೌರವಿಸಿ: ನೀಟ್ ಪ್ರತಿಭಟನೆ ಕುರಿತು ಕೇಂದ್ರಕ್ಕೆ ರಾಹುಲ್ ಗಾಂಧಿ ಸಲಹೆ

ಯುವಜನರ ಧ್ವನಿಯನ್ನು ಗೌರವಿಸಿ: ನೀಟ್ ಪ್ರತಿಭಟನೆ ಕುರಿತು ಕೇಂದ್ರಕ್ಕೆ ರಾಹುಲ್ ಗಾಂಧಿ ಸಲಹೆ

For Dai;y Updates Join Our whatsapp Group

ನವದೆಹಲಿ: ಯುವಜನರ ಧ್ವನಿಯನ್ನು ಎಲ್ಲಾ ರಾಜಕೀಯ ಪಕ್ಷಗಳು ಗೌರವಿಸಬೇಕು ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಕರೆ ನೀಡಿದ್ದಾರೆ.

ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳು (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ, 2026’ ಕುರಿತ ಚರ್ಚೆಯಲ್ಲಿ ಮಾತನಾಡಿದ ಅವರು, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಬಳಿಕ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳನ್ನು ಸಮರ್ಥಿಸಿಕೊಂಡರು.

ವಿದ್ಯಾರ್ಥಿಗಳ ಪ್ರತಿಭಟನೆ ಯಾವುದೇ ಕೋಪ, ಹಿಂಸೆ ಅಥವಾ ದ್ವೇಷದ ಅಭಿವ್ಯಕ್ತಿಯಲ್ಲ. ಅದು “ಭಾರತದ ಯುವಜನತೆಯ ಭರವಸೆಯ ಅಭಿವ್ಯಕ್ತಿ” ಎಂದು ರಾಹುಲ್ ಗಾಂಧಿ ಹೇಳಿದರು.

ತಮ್ಮ ಆತಂಕ ಹಾಗೂ ದುಗುಡವನ್ನು ವ್ಯಕ್ತಪಡಿಸಲು ಯುವಕರು ಬೀದಿಗಿಳಿದಿರುವುದು ದೇಶದ ಭವಿಷ್ಯದ ಬಗ್ಗೆ ವಿಶ್ವಾಸ ಮೂಡಿಸಿದೆ. ದೇಶದ ಭವಿಷ್ಯವಾಗಿರುವ ಯುವಜನರು ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸುತ್ತಿರುವುದನ್ನು ನೋಡಿದಾಗ ನನಗೆ ಸಂತೋಷ ಹಾಗೂ ಭರವಸೆ ಮೂಡಿದೆ ಎಂದು ಅವರು ಹೇಳಿದರು.

ಪ್ರತಿಭಟನೆಗಳು ಮುಂದಿನ ಪೀಳಿಗೆಯ ಆಶೋತ್ತರಗಳನ್ನು ಪ್ರತಿಬಿಂಬಿಸುತ್ತವೆ ಎಂದು ಹೇಳಿದ ರಾಹುಲ್ ಗಾಂಧಿ, ಇದು ಕೋಪ ಅಥವಾ ಹಿಂಸೆಯ ಸಂಕೇತವಲ್ಲ. ದೇಶದ ಯುವಜನರ ಮತ್ತು ಭವಿಷ್ಯದ ಪೀಳಿಗೆಯ ಧ್ವನಿಯಾಗಿದೆ ಎಂದು ತಿಳಿಸಿದರು.

ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಕುರಿತು ಮಾತನಾಡಿದ ಅವರು, ವಿದ್ಯಾರ್ಥಿಗಳು ಸತ್ಯ ಮತ್ತು ಜ್ಞಾನದ ಹುಡುಕಾಟದಲ್ಲಿದ್ದಾರೆ. ಯುವ ಸಮುದಾಯದ ಧ್ವನಿಯನ್ನು ಸರ್ಕಾರ ನಿರ್ಲಕ್ಷಿಸದೆ ಆಲಿಸಬೇಕು ಎಂದು ಹೇಳಿದರು.

ಬಿಜೆಪಿಯಲ್ಲಿರುವ ತಮ್ಮ ಸ್ನೇಹಿತರು ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಯುವಜನರ ಅಭಿವ್ಯಕ್ತಿಯನ್ನು ಗೌರವಿಸಬೇಕು. ಯುವಕರ ಸಮಸ್ಯೆಗಳಿಗೆ ಸ್ಪಂದಿಸುವ ಅಗತ್ಯವಿದೆ ಎಂದು ರಾಹುಲ್ ಗಾಂಧಿ ಲೋಕಸಭೆಯಲ್ಲಿ ಒತ್ತಿ ಹೇಳಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img