ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ಸುಮಾರು ೩೫ ವರ್ಷಗಳ ಒಳ ಮೀಸಲಾತಿ ಹೋರಾಟದ ಫಲವಾಗಿ ತಾಲೂಕಿನ ಮೋರಗೇರಿ ಗ್ರಾಮದ ಮಾದಿಗ ಸಮಾಜದ ವಿದ್ಯಾರ್ಥಿನಿ ಕುಮಾರಿ ದುರುಗಮ್ಮ ಉತ್ತಂಗಿ ಬೆಂಗಳೂರಿನ ಸಪ್ತಗಿರಿ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ಸೀಟು ಪಡೆದಿದ್ದಾರೆ.
ಒಳ ಮೀಸಲಾತಿ ಜಾರಿಯಿಂದ ವಿದ್ಯಾರ್ಥಿಗಳಿಗೆ ತಮ್ಮ ವಿದ್ಯಾರ್ಹತೆಗೆ ಅನುಗುಣವಾಗಿ ಉನ್ನತ ಶಿಕ್ಷಣ ಹಾಗೂ ಸರ್ಕಾರಿ ಉದ್ಯೋಗ ಪಡೆಯಲು ಅವಕಾಶ ದೊರೆತಿದೆ ಎಂದು ಮಹಾಸಭಾ ಅಧ್ಯಕ್ಷ ಪೂಜಾರ್ ಲೋಕಪ್ಪ ಮಾದರ ಹೇಳಿದರು.
ಪೋಷಕರು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ, ಅವರನ್ನು ಉನ್ನತ ಶಿಕ್ಷಣದತ್ತ ಕೊಂಡೊಯ್ಯಬೇಕು. ದುರುಗಮ್ಮ ಅವರ ಮುಂದಿನ ವಿದ್ಯಾಭ್ಯಾಸಕ್ಕೆ ಸಮಾಜ ಸದಾ ಬೆಂಬಲವಾಗಿ ನಿಲ್ಲಲಿದೆ ಎಂದು ಅವರು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಗದ್ದಿಕೇರಿ ಎಚ್. ದೊಡ್ಡಬಸಪ್ಪ, ಬೆಣಕಲ್ ಪ್ರಕಾಶ್, ವರಲಹಳ್ಳಿ ಶಿವು, ಮಂಜುನಾಥ ಬ್ಯಾಲಾಳ, ಬುಳ್ಳಪ್ಪ ಉಪ್ಪಾರಗಟ್ಟಿ, ಅರ್ಜುನ್ ಟಿ., ಕಿತ್ತೂರು ಮಲ್ಲಪ್ಪ ಸೇರಿದಂತೆ ಸಮಾಜದ ಮುಖಂಡರು ಹಾಗೂ ಬಾಂಧವರು ಉಪಸ್ಥಿತರಿದ್ದರು.



