ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ – ಆರ್.ಅಶೋಕ್

0
Spread the love

ಬೆಂಗಳೂರು: ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅನೇಕ ಕೊಲೆ, ಅತ್ಯಾಚಾರ ಪ್ರಕರಣಗಳು ನಡೆಯುತ್ತಿವೆ. ಈಗ ನಿವೃತ್ತ ಪೊಲೀಸ್ ಅಧಿಕಾರಿಯ ಹತ್ಯೆಯಾಗಿದೆ. ಏನೇ ಆಗಿದ್ದರೂ ಘಟನೆಯನ್ನು ಖಂಡಿಸ್ತೇವೆ. ಇದರಿಂದ ಕಾನೂನು ಸುವ್ಯವಸ್ಥೆ ಸರಿಯಿಲ್ಲ ಅಂತ ಗೊತ್ತಾಗಿದೆ.

Advertisement

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ. ಪೊಲೀಸರಿದ್ದಾರೆ. ಕ್ರಮ ಕೈಗೊಳ್ತಾರೆ ಅನ್ನೋ ಭಯ ಹೋಗಿದೆ. ಹಾಗಾಗಿ ಇಂತಹ ಘಟನೆಗಳು ನಡೆಯುತ್ತಿದೆ. ಪೊಲೀಸ್ ಇಲಾಖೆ ಯಾರು ನಡೆಸುತ್ತಿದ್ದಾರೆ ಅನ್ನೋದು ಸ್ಪಷ್ಟವಾಗಬೇಕು” ಎಂದು ಗೃಹ ಸಚಿವರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.


Spread the love

LEAVE A REPLY

Please enter your comment!
Please enter your name here