ಮೈಸೂರಿನ ಉದಯಗಿರಿಯಲ್ಲಿ ಗಲಾಟೆ ಪ್ರಕರಣ: 8 ಮಂದಿ ಆರೋಪಿಗಳು ಅರೆಸ್ಟ್

0
Spread the love

ಮೈಸೂರು: ಮೈಸೂರಿನ ಉದಯಗಿರಿಯಲ್ಲಿ ಪೊಲೀಸ್ ಠಾಣೆಯಲ್ಲಿ ನಡೆದ ಗಲಾಟೆ ವಿಚಾರ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಆರೋಪಿಗಳನ್ನ ಅರೆಸ್ಟ್ ಮಾಡಿದ್ದಾರೆ. ಮೈಸೂರಿನ ಶಾಂತಿನಗರದ ಸುಹೇಲ್@ಸೈಯದ್ ಸುಹೇಲ್,

Advertisement

ರಹೀಲ್ ಪಾಷಾ, ಅಯಾನ್, ಸತ್ಯನಗರದ ನಿವಾಸಿ ಏಜಾಜ್, ಮೈಸೂರಿನ ಗೌಸಿಯಾನಗರದ ನಿವಾಸಿ ಸೈಯದ್ ಸಾದಿಕ್, ರಾಜೀವ್​ ನಗರದ ಸಾದಿಕ್ ಪಾಷಾ ಅಲಿಯಾಸ್ ಸಾದಿಕ್, ಅರ್ಬಾಜ್ ಷರೀಫ್, ಶೋಹೆಬ್ ಪಾಷಾ ಬಂಧಿತ ಆರೋಪಿಗಳು.

ಮತ್ತಷ್ಟು ಆರೋಪಿಗಳ ಸೆರೆಗೆ ಸಿಸಿಬಿ ಪೊಲೀಸರು ಬಲೆ ಬೀಸಿದ್ದಾರೆ. ನಿನ್ನೆ ರಾತ್ರಿ ಪೊಲೀಸರು ಆರೋಪಿಗಳ ಸೆರೆಗೆ ಹೋಗಿದ್ದರು. ಟವರ್​ ಲೊಕೇಶನ್​​ ಆಧಾರದಲ್ಲಿ ಮನೆ ಮನೆ ತೆರಳಿದ್ದರು. ಆದರೆ ಪೊಲೀಸರು ಅರೆಸ್ಟ್ ಮಾಡುತ್ತಾರೆಂಬ ಭೀತಿಯಲ್ಲೇ ಆರೋಪಿಗಳು ಮನೆ ಬಿಟ್ಟು ಓಡಿಹೋಗಿದ್ದಾರೆ.

ಮೊಬೈಲ್ ಮನೆಯಲ್ಲೇ ಇಟ್ಟು ಊರು ಬಿಟ್ಟಿದ್ದಾರೆ. ಸದ್ಯ ಮೈಸೂರಿನ ಸಿಸಿಬಿ ಪೊಲೀಸರು ಪ್ರಕರಣ ಕೈಗೆತ್ತಿಕೊಂಡಿದ್ದಾರೆ. ಉದಯಗಿರಿ ಠಾಣೆ ರಸ್ತೆಯಲ್ಲಿನ 10ಕ್ಕೂ ಹೆಚ್ಚು ಸಿಸಿಕ್ಯಾಮರಾ ಡಿವಿಆರ್ ವಶಕ್ಕೆ ಪಡೆದು ಪರಿಶೀಲನೆ ಮಾಡಿದ್ದಾರೆ.


Spread the love

LEAVE A REPLY

Please enter your comment!
Please enter your name here