HomeSports Newsಬಾಗಲಕೋಟೆಯ ಬಡ ವಿದ್ಯಾರ್ಥಿನಿಗೆ ಸಹಾಯ ಹಸ್ತ ಚಾಚಿದ ರಿಷಭ್ ಪಂತ್..!

ಬಾಗಲಕೋಟೆಯ ಬಡ ವಿದ್ಯಾರ್ಥಿನಿಗೆ ಸಹಾಯ ಹಸ್ತ ಚಾಚಿದ ರಿಷಭ್ ಪಂತ್..!

For Dai;y Updates Join Our whatsapp Group

Spread the love

ಬಾಗಲಕೋಟೆ: ಬಾಗಲಕೋಟೆಯ ಪ್ರತಿಭಾವಂತ ವಿದ್ಯಾರ್ಥಿನಿ ಜ್ಯೋತಿ ಕಣಬೂರ ಅವರ ಶಿಕ್ಷಣಕ್ಕೆ ಭಾರತೀಯ ಕ್ರಿಕೆಟ್‌ ತಂಡದ ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌ ರಿಷಬ್‌ ಪಂತ್‌ ನೆರವು ನೀಡಿದ್ದಾರೆ. ಹೌದು ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ರಬಕವಿ ಗ್ರಾಮದ ಜ್ಯೋತಿ ಕಣಬೂರ್ ಅವರು ಜಮಖಂಡಿಯಲ್ಲಿನ ಬಿಎಲ್​ಡಿ ಕಾಲೇಜ್​ನಲ್ಲಿ ಪ್ರಸ್ತುತ ಬಿಸಿಎ ಪ್ರಥಮ ಸೆಮಿಸ್ಟರ್​ನಲ್ಲಿ ಓದುತ್ತಿದ್ದಾರೆ.

ಜ್ಯೋತಿ ಕಣಬೂರ್ ದ್ವಿತೀಯ ಪಿಯುಸಿ ಕಾಮರ್ಸ್​ ನಲ್ಲಿ ಶೇ 85 ರಷ್ಟು ಅಂಕ ಪಡೆದಿದ್ದರು. ಇವರಿಗೆ ಬಿಸಿಎ ಓದಬೇಕು ಎಂಬ ಆಸೆ ಇತ್ತು. ಆದರೆ, ಜ್ಯೋತಿ ಕಣಬೂರ್ ಪೋಷಕರು ಕಡುಬಡವರಾಗಿದ್ದು, ಬಿಸಿಎ ಕಾಲೇಜಿಗೆ ದಾಖಲಿಸಲು ಹಣ ಇಲ್ಲದೆ ಪರದಾಡುತ್ತಿದ್ದರು. ಮಗಳ ವಿದ್ಯಾಭ್ಯಾಸಕ್ಕೆ ಜ್ಯೋತಿ ತಂದೆ ತೀರ್ಥಯ್ಯ ಕಣಬೂರ ಹಣ ಹೊಂದಿಸಲಾಗದೆ ಕಷ್ಟ ಪಡುತ್ತಿದ್ದರು.

ಈ‌ ವಿಷಯ ಅದೇ ಊರಿನ ಅನಿಲ ಹುಣಸಿಕಟ್ಟಿ ಎಂಬ ಯುವಕನಿಗೆ ಗೊತ್ತಾಗಿದೆ. ಈ ಸಂದರ್ಭದಲ್ಲಿ ಅನಿಲ‌ ಹುಣಸೀಕಟ್ಟಿ ಅವರ ಸ್ನೇಹಿತರು ಐಪಿಎಲ್‌‌ನಲ್ಲಿ‌ ಕೆಲಸ ‌ಮಾಡುತ್ತಿದ್ದರು. ಇವರಿಗೆ ಅನಿಲ‌ ಅವರು ವಿಷಯ ತಿಳಿಸಿದ್ದಾರೆ. ಅನಿಲ್​ ಅವರ ಸ್ನೇಹಿತರು ಹಣದ ಅವ್ಯಶಕತೆ ಇರುವ ವಿಚಾರವನ್ನು ರಿಷಭ್ ಪಂತ್​ ಅವರ ಗಮನಕ್ಕೆ ತಂದಿದ್ದಾರೆ. ಆಗ, ರಿಷಭ್​ ಪಂತ್​ ಅವರು ಜ್ಯೋತಿಯ ಬಿಸಿಎ ವ್ಯಾಸಂಗಕ್ಕೆ 40 ಸಾವಿರ ರೂ. ನೀಡಿದ್ದಾರೆ. ಈ ಬಗ್ಗೆ ವಿದ್ಯಾರ್ಥಿನಿ ಜ್ಯೋತಿ ರಿಷಬ್‌ ಸರ್‌ ಉಪಕಾರ ಮರೆಯುವಂತಿಲ್ಲ, ನಾನು ಚೆನ್ನಾಗಿ ಓದಿ ಉತ್ತಮ ಅಂಕ ಗಳಿಸುತ್ತೇನೆ. ಅವರ ನೆರವಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!