ತಾಯಿ, ಶಿಶು ಮರಣ ಪ್ರಮಾಣ ಏರಿಕೆ: ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ದಿನೇಶ್ ಗುಂಡೂರಾವ್ ಸೂಚನೆ

0
Spread the love

ದಾವಣಗೆರೆ: ಕರ್ನಾಟಕವು ಆರೋಗ್ಯ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದರೂ, ತಾಯಿ ಮರಣ ಹಾಗೂ ಶಿಶು ಮರಣ ಪ್ರಮಾಣ ಕಳವಳ ಹುಟ್ಟಿಸುವಂತಿದೆ.‌ ಆದ್ದರಿಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳ ಜೊತೆ ಅವರು ಸಭೆ ನಡೆಸಿದ್ದಾರೆ. ಈ ವೇಳೆ ನವಜಾತ ಶಿಶುಗಳ ಮರಣ ಹಾಗೂ ಬಾಣಂತಿಯರ ಸಾವಿನ ಬಗ್ಗೆ ತೀವ್ರ ನಿಗವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Advertisement

ಕಳೆದ ಏಳು ತಿಂಗಳಲ್ಲಿ 135 ನವಜಾತು ಶಿಶುಗಳು ಹಾಗೂ 28 ತಾಯಂದಿರ ಸಾವಾಗಿದೆ. ಖಾಸಗಿ ಆಸ್ಪತ್ರೆಗಳಿಗಿಂತ, ಸರ್ಕಾರಿ ಜಿಲ್ಲಾಸ್ಪತ್ರೆಗಳಲ್ಲೇ ಮರಣ ಪ್ರಮಾಣ ಏರಿಕೆಯಾಗಿದೆ. ಪ್ರತಿ ತಿಂಗಳು 600 ರಿಂದ 700 ಹೆರಿಗೆ ಆಗುತ್ತಿರುವ ಜಿಲ್ಲಾಸ್ಪತ್ರೆಯಲ್ಲಿ ನವಜಾತ ಶಿಶುಗಳ ಸಾವಾಗುತ್ತಿದೆ. ಇನ್ನೂ ಕಡೇ ಕ್ಷಣದಲ್ಲಿ ತೀವ್ರ ತುರ್ತು ಸಂದರ್ಭಗಳಲ್ಲಿ ಬರುವುದರಿಂದ ಸಾವಿನ ಸಂಖ್ಯೆ ಹೆಚ್ಚಳವಾಗುತ್ತಿದೆ.

ಬಹುತೇಕ ಬಡವರೇ ಆಗಮಿಸುವ ಜಿಲ್ಲಾಸ್ಪತ್ರೆಗಳಲ್ಲಿ ನವಜಾತು ಶಿಶುಗಳ ಸಾವಿನ ಸಂಖ್ಯೆ ಏರಿಕೆಯಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಸಿಜೇರಿಯನ್ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದೆ. ಇನ್ನೂ ದಾವಣಗೆರೆ ನಗರದ ಖಾಸಗಿ ಆಸ್ಪತ್ರೆಗಳಲ್ಲಿ 72%ನಷ್ಟು ಸಿಜೇರಿಯನ್ ನಡೆಯುತ್ತಿದೆ. ಈ ಎಲ್ಲಾ ವಿಚಾರವಾಗಿ, ಮಧ್ಯ ಕರ್ನಾಟಕದ ಹಾವೇರಿ, ಚಿತ್ರದುರ್ಗ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಚರ್ಚೆ ನಡೆಸಿದ್ದಾರೆ. ಅಲ್ಲದೇ ಪ್ರಾಥಮಿಕ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ತೀವ್ರ ನಿಗಾವಹಿಸುವಂತೆ ಡಿಹೆಚ್‍ಓಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.


Spread the love

LEAVE A REPLY

Please enter your comment!
Please enter your name here