ಬೆಂಗಳೂರು:-ನಗರದ ಶಿವಾನಂದ ಸರ್ಕಲ್ ಬಳಿ ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕುಟುಂಬವೊಂದು ಕೂದಲೆಳೆ ಅಂತರದಲ್ಲಿ ಬಚಾವ್ ಆಗಿರುವ ಘಟನೆ ನಗರದ ಶಿವಾನಂದ ಸರ್ಕಲ್ ಬಳಿ ಜರುಗಿದೆ.
Advertisement
ಯುಸೂಫ್ ಎಂಬುವವರು ತಮ್ಮ ಇಬ್ಬರು ಮಕ್ಕಳು ಸೇರಿ ಕುಟುಂಬದ ನಾಲ್ಕು ಜನ ಭದ್ರಪ್ಪ ಲೇ ಔಟ್ ನಿಂದ ಮೆಜೆಸ್ಟಿಕ್ ರೈಲ್ವೇ ನಿಲ್ದಾಣದ ಕಡೆ ಕಾರಲ್ಲಿ ತೆರಳ್ತಿದ್ದರು. ಈ ವೇಳೆ ನಿಯಂತ್ರಣ ತಪ್ಪಿದ ಕಾರು, ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ನಾಲ್ವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕಾರು ಡಿಕ್ಕಿ ಹೊಡೆದ ತೀವ್ರತೆಗೆ ಡಿವೈಡರ್ ಬ್ಲಾಕ್ ಪುಡಿ-ಪುಡಿಯಾಗಿದೆ. ಕೂಡಲೇ ಸ್ಥಳಕ್ಕೆ ಹೈಗ್ರೌಂಡ್ಸ್ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಬಳಿಕ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.