ಭೀಕರ ರಸ್ತೆ ಅಪಘಾತ: ಸಿಮೆಂಟ್ ಲಾರಿ, ಬುಲೆರೋ ಮುಖಾಮುಖಿ ಡಿಕ್ಕಿ ಹೊಡೆದು ಇಬ್ಬರು ಸಾವು!

0
Spread the love

ಕೊಪ್ಪಳ:- ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕುಷ್ಟಗಿ ತಾಲೂಕಿನ ನಂದಾಪೂರ ಕ್ರಾಸ್ ಬಳಿ ಜರುಗಿದೆ.

Advertisement

ಸಿಮೆಂಟ್ ಲಾರಿ ಹಾಗೂ ಬುಲೆರೋ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೆಂಕಿ ಹೊತ್ತಿಕೊಂಡು ಇಬ್ಬರು ಸಜೀವ ದಹನಗೊಂಡಿದ್ದಾರೆ. 25 ವರ್ಷದ ಸಿದ್ಧಪ್ಪ ಪೊಲೀಸಗೌಡರ, 26 ವರ್ಷದ ಅಂಜನಪ್ಪ ಪೊಲೀಸ್‌ಗೌಡರ ಮೃತರು. ಗುರುವಾರ ಬೆಳಿಗ್ಗೆ ಸುಮಾರು 4 ಗಂಟೆಗೆ ಸಿಮೆಂಟ್ ಮಿಕ್ಸರ್ ಯಂತ್ರದ ಲಾರಿಯನ್ನು ತೆಗೆದುಕೊಂಡು ಕುಷ್ಟಗಿ ಕಡೆಗೆ ಹೊರಟಿದ್ದರು. ಇದೇ ವೇಳೆ ಕುಷ್ಟಗಿ ತರಕಾರಿ ಮಾರುಕಟ್ಟೆಗೆ ಸೌತೆಕಾಯಿ ಹಾಕಿ, ಲಿಂಗಸಗೂರು ಕಡೆಗೆ ಹೊರಟಿದ್ದ ಬುಲೆರೋ ಮುಖಾಮುಖಿ ಡಿಕ್ಕಿಯಾಗಿವೆ. ಡಿಕ್ಕಿಯಾದ ರಭಸಕ್ಕೆ ಬುಲೆರೋ ವಾಹನಕ್ಕೆ ಬೆಂಕಿ ಆವರಿಸಿದ್ದು, ಇಬ್ಬರು ಸಜೀವ ದಹನಗೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಸಿಪಿಐ ಯಶವಂತ ಬಿಸನಳ್ಳಿ, ತಾವರಗೇರಾ ಪಿಎಸ್‌ಐ ಸೇರಿದಂತೆ ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ತಿಮ್ಮಾರೆಡ್ಡಿ ಅವರು ಭೇಟಿ ನೀಡಿ, ಪರಿಶೀಲಿಸಿದರು.


Spread the love

LEAVE A REPLY

Please enter your comment!
Please enter your name here