ನೆಲಮಂಗಲ: ನೆಲಮಂಗಲ ತಾಲೂಕಿನ ಡಾಬಸ್ ಪೇಟೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ವೃದ್ಧನೋರ್ವ ಸಾವನ್ನಪ್ಪಿದ ಘಟನೆ ಜರುಗಿದೆ.
ಆಗಳಕುಪ್ಪೆ ನಿವಾಸಿ 75 ವರ್ಷದ ಕೆಂಪರಂಗಯ್ಯ ಮೃತ ವೃದ್ಧ. ಪಾದಚಾರಿ ವೃದ್ಧನ ಮೇಲೆ ಕಂಟೇನರ್ ಲಾರಿ ಹರಿದು ಈ ದುರ್ಘಟನೆ ಸಂಭವಿಸಿದೆ. ತುಮಕೂರು ಕಡೆಯಿಂದ ದೊಡ್ಡಬಳ್ಳಾಪುರ ಮಾರ್ಗದಲ್ಲಿ ಲಾರಿ ತೆರಳುತ್ತಿತ್ತು. ಈ ವೇಳೆ ಪಾದಚಾರಿಗೆ ಗುದ್ದಿದ ಪರಿಣಾಮ, ಲಾರಿಯ ಹಿಂಬದಿ ಚಕ್ರಕ್ಕೆ ಸಿಲುಕಿ ವೃದ್ಧ ನರಳಾಡಿ ಸಾವನ್ನಪ್ಪಿದ್ದಾರೆ.
ಘಟನೆ ಹಿನ್ನೆಲೆ, ಲಾರಿ ಹಾಗೂ ಚಾಲಕನನ್ನು ಡಾಬಸ್ ಪೇಟೆ ಪೋಲಿಸರು ವಶಕ್ಕೆ ಪಡೆದಿದ್ದಾರೆ. ಅಪಘಾತದಿಂದ ಸ್ಥಳದಲ್ಲಿ ಸಂಚಾರ ಅಸ್ತವ್ಯಸ್ತ ಉಂಟಾಗಿದ್ದು, ಡಾಬಸ್ ಪೇಟೆ ಪೊಲೀಸರು ಹರಸಾಹಸ ಪಟ್ಟಿದ್ದಾರೆ.



