ಬೆಂಗಳೂರು: ಬೆಂಗಳೂರಿನ ಬಾಗಲೂರು ರಸ್ತೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಎಂಜಿನಿಯರ್ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಜರುಗಿದೆ. 24 ವರ್ಷದ ನಂದಿನಿ ಮೃತ ವಿದ್ಯಾರ್ಥಿನಿ.
ಏರೋನಾಟಿಕಲ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ನಂದಿನಿ ಮೂಲತಃ ನೆಲಮಂಗಲದ ಹುಸ್ಕೂರು ಗ್ರಾಮದವರು. ನಿನ್ನೆ ಸಂಜೆ 6:30 ರ ಬಾಗಲೂರು ರಸ್ತೆಯ ಕೆಐಎಡಿಬಿ ಜಂಕ್ಷನ್ ನಲ್ಲಿ ಸ್ಕೂಟರ್ ನಲಿದ್ದ ನಂದಿನಿಗೆ ಫಾರ್ಚೂನರ್ ಕಾರ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಯುವತಿಯ ತಲೆ ಮತ್ತೆ ಕೈಗೆ ಗಂಭೀರ ಗಾಯವಾಗಿದೆ. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಯುವತಿ ನಂದಿನಿ ಕೊನೆಯುಸಿರೆಳೆದಿದ್ದಾಳೆ.
ಕೆಲಸಕ್ಕೆ ಸೇರಿದ ಬಳಿಕ ಬಾಗಲೂರಿನ ಪಿಜಿಯಲ್ಲಿ ನಂದಿನಿ ವಾಸ ಮಾಡ್ಕೊಂಡಿದ್ಲು. ನಿನ್ನೆ ಸಂಜೆ ಕೆಲಸ ಮುಗಿಸಿ ಪಿಜಿಗೆ ಹಿಂದಿರುಗುವಾಗ ಅಪಘಾತವಾಗಿದೆ. ಅಪಘಾತದ ರಭಸಕ್ಕೆ ನಂದಿನಿ ತಲೆ ಮತ್ತು ಕಾಲಿಗೆ ತೀವ್ರ ಪೆಟ್ಟು ಬಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ತೀವ್ರ ರಕ್ತಸ್ರಾವವಾಗಿ ಸಾವನ್ನಪ್ಪಿದ್ದಾರೆ.
ಮರಣೋತ್ತರ ಪರೀಕ್ಷೆಗೆ ಯಲಹಂಕ ಸರ್ಕಾರಿ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಿ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರಿಸಲಾಗಿದೆ. ಈ ಬಗ್ಗೆ ಚಿಕ್ಕಜಾಲ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಸಲಾಗ್ತಿದೆ.