ರಾಬರಿ ಪ್ರಕರಣ: ಆಂಧ್ರ ಪೊಲೀಸರಿಂದ ಕಾಂಗ್ರೆಸ್ ಮುಖಂಡ ಅರೆಸ್ಟ್!

0
Spread the love

ಕೋಲಾರ:- ಜಿಲ್ಲೆಯ ಕೆಜಿಎಫ್ ಕಾಂಗ್ರೆಸ್ ಮುಖಂಡ ಹಾಗೂ ಹಾಲಿ ನಗರಸಭೆ ಸದಸ್ಯನನ್ನು ರಾಬರಿ ಪ್ರಕರಣದಲ್ಲಿ ಆಂಧ್ರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಜಯಪಾಲ್ ಬಂಧಿತ ‘ಕೈ’ ಮುಖಂಡ.

Advertisement

ಏಪ್ರಿಲ್ 2 ರಂದು ಕೆಜಿಎಫ್​ನ ಜಯಪಾಲ್ ಹಾಗೂ ತಂಡ, ಆಂಧ್ರ ಹಾಗೂ ತಮಿಳುನಾಡು ಗಡಿ ನಾಯಕನೇರಿ ಘಾಟ್ ಬಳಿ, ಚಿನ್ನದ ವ್ಯಾಪಾರಿ ಚೇತನ್ ಜೈನ್ ಎಂಬುವವರ ಕಾರು ಅಡ್ಡಗಟ್ಟಿ 3.5 ಕೆಜಿ ಚಿನ್ನವನ್ನು ದರೋಡೆ ಮಾಡಿದರು.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ಆಂಧ್ರಪ್ರದೇಶ ಪೊಲೀಸರು ಪ್ರಮುಖ ಆರೋಪಿ ಕಾಂಗ್ರೆಸ್ ಮುಖಂಡ ಜಯಪಾಲ್ ರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅಲ್ಲದೇ ರಾಬರಿ ಮಾಡಿದ್ದ ಚಿನ್ನ ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


Spread the love

LEAVE A REPLY

Please enter your comment!
Please enter your name here