ಬೆಂಗಳೂರು ಗ್ರಾಮಾಂತರ:- ತಾಲೂಕಿನ ದಾಬಸ್ಪೇಟೆ ಹೆದ್ದಾರಿಯಲ್ಲಿ ದರೋಡೆ ಮಾಡುತ್ತಿದ್ದ ರೌಡಿಶೀಟರ್ ಕಾಲಿಗೆ ಫೈರಿಂಗ್ ಮಾಡಿರುವ ಘಟನೆ ಜರುಗಿದೆ.
Advertisement
ಕಂಬಾಳು ಗ್ರಾಮದ ಬಳಿ ಬಂಧಿಸಲು ತೆರಳಿದ್ದ ವೇಳೆ ಹೆಡ್ ಕಾನ್ಸ್ಟೇಬಲ್ ಇಮ್ರಾನ್ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಆರೋಪಿ ಯತ್ನಿಸಿದ್ದ. ಈ ವೇಳೆ ಇನ್ಸ್ಪೆಕ್ಟರ್ ಬಿ.ರಾಜು ಫೈರಿಂಗ್ ಮಾಡಿದ್ದಾರೆ.
ಪಲ್ಸರ್ ಬೈಕ್ನಲ್ಲಿ ಬಂದು ದರೋಡೆಗೆ ಯತ್ನಿಸಿದ್ದ ಆರೋಪಿ ಜಯಂತ್, ಕೊಲೆ, ಕೊಲೆ ಯತ್ನ, ದರೋಡೆ ಸೇರಿ 56 ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ. ಸಧ್ಯ ಗಾಯಾಳು ರೌಡಿಶೀಟರ್ ಜಯಂತ್ ಹಾಗೂ ಹೆಡ್ ಕಾನ್ಸ್ಟೇಬಲ್ ಇಮ್ರಾನ್ಗೆ ದಾಬಸ್ಪೇಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ದಾಬಸ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.