ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ಕೊಟ್ಟ ರಾಕಿಂಗ್ ಸ್ಟಾರ್: ರಾವಣನಾಗಿ ಮಿಂಚೋಕೆ ರೆಡಿಯಾದ್ರೂ ಯಶ್!

0
Spread the love

ಮಧ್ಯ ಪ್ರದೇಶದ ಉಜ್ಜಯಿನಿಯ ಮಹಾಕಾಳೇಶ್ವರ ದೇಗುಲಕ್ಕೆ ರಾಕಿಂಗ್ ಸ್ಟಾರ್ ಯಶ್ ಅವರು ಭೇಟಿ ಕೊಟ್ಟಿದ್ದರು. ರಾಮಾಯಣ’ ಸಿನಿಮಾ ಶೂಟಿಂಗ್‌ಗೂ ಮುನ್ನ ಯಶ್ ಶಿವನ ಮೊರೆ ಹೋಗಿದ್ದಾರೆ.

Advertisement

ಚಿತ್ರೀಕರಣಕ್ಕೆ ಭಾಗಿಯಾಗುವ ಮುನ್ನ ಯಶ್ ಶಿವನ ದೇಗುಲಕ್ಕೆ ಭೇಟಿ ನೀಡಿದ್ದಾರೆ. ದೇವರ ದರ್ಶನದ ಬಳಿನ ನಟ ಮಾತನಾಡಿ, ಬಹಳ ಖುಷಿ ಆಗುತ್ತಿದೆ. ಶಿವನ ಆಶೀರ್ವಾದ ಪಡೆಯಲು ಬಂದೆ. ನಾನು ಚಿಕ್ಕಂದಿನಿಂದ ಶಿವನ ದೊಡ್ಡ ಭಕ್ತ. ನಾವು ಮನೆದೇವರು ಎಂದು ಕರೆಯುತ್ತೇನೆ.

ನಮ್ಮ ಕುಲದೇವರು ಶಿವ. ಇಲ್ಲಿಗೆ ಬಂದಿರುವುದು ಸಂತಸ ತಂದಿದೆ. ದೇವರ ಸನ್ನಿಧಿಯಲ್ಲಿ ಧ್ಯಾನ ಮಾಡುತ್ತಾ ಕುಳಿತಾಗ ಸಮಯ ಕಳೆದಿದ್ದೇ ಗೊತ್ತಾಗಲಿಲ್ಲ. ಅದ್ಭುತ ಅನುಭವ ಸಿಕ್ಕಿದೆ ಎಂದು ಯಶ್ ಹೇಳಿದ್ದಾರೆ.

ಅಂದಹಾಗೆ, ಶೀಘ್ರದಲ್ಲೇ ‘ರಾಮಾಯಣ’ ಸಿನಿಮಾ ಶೂಟಿಂಗ್‌ನಲ್ಲಿ ಯಶ್ ಭಾಗಿಯಾಗಲಿದ್ದಾರೆ. ಇದರಲ್ಲಿ ಯಶ್ ರಾವಣನಾಗಿ ಅಬ್ಬರಿಸಲಿದ್ದಾರೆ.


Spread the love

LEAVE A REPLY

Please enter your comment!
Please enter your name here