RSS ಗೀತೆ ವಿವಾದ: ನಾನು ಎಲ್ಲರ ಬಳಿಯೂ ಕ್ಷಮೆ ಕೇಳುತ್ತೇನೆ – ಡಿಸಿಎಂ ಡಿಕೆ ಶಿವಕುಮಾರ್‌

0
Spread the love

ಬೆಂಗಳೂರು:  ಡಿಸಿಎಂ ಡಿಕೆ ಶಿವಕುಮಾರ್ ಸದನದಲ್ಲಿ ಆರ್​ಎಸ್​ಎಸ್​ ಗೀತೆ ಹಾಡಿದ ವಿಚಾರ ಭಾರೀ ವಿವಾದ ಸೃಷ್ಟಿಸಿತ್ತು. ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ನನ್ನ ಕಾಂಗ್ರೆಸ್ ಕಾರ್ಯಕರ್ತರಿಗೆ, ಪಕ್ಷದ ನಾಯಕರಿಗೆ, ಇಂಡಿಯಾ ಕೂಟಾದ ನಾಯಕರಲ್ಲಿ ಕ್ಷಮೆ ಕೇಳುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ.

Advertisement

ನಗರದಲ್ಲಿ ಮಾತನಾಡಿದ ಅವರು, ನಾನು ಯಾರಿಗೂ ಹೆದರಿಲ್ಲ ಮತ್ತು ಹೆದರಿ ಕ್ಷಮೆ ಕೇಳುತ್ತಿಲ್ಲ. ಪಾಸಿಂಗ್ ರೆಫರೆನ್ಸ್ ನಲ್ಲಿ ಅ ಹಾಡು ಹೇಳಿದ್ದೇನೆ. ಪಕ್ಷದ ನನ್ನ ಲಾಯಲ್ಟಿ ಯಾರು ಪ್ರಶ್ನೆ ಮಾಡೋದು ಬೇಡ. ಅದನ್ನ ಪ್ರಶ್ನೆ ಮಾಡಿದ್ರೆ ಅವರು ಮೂರ್ಖರು ಎಂದು ಹೇಳಿದರು. ನಾನು ಹುಟ್ಟು ಕಾಂಗ್ರೆಸಿಗ ಮತ್ತು ಸಾಯೋದು ಕಾಂಗ್ರೆಸ್‌ನಲ್ಲೇ. ನನ್ನ ಧರ್ಮ ನಾನು ಬಿಡಲು ತಯಾರು ‌ಇಲ್ಲ. ನಾನು ಈ ಧರ್ಮದಲ್ಲಿ ಹುಟ್ಟಿದ್ದೇನೆ. ಅದೆ ಎಲ್ಲಾ ಧರ್ಮಗಳ ಮೇಲೆ ನಂಬಿಕೆ‌ ಇದೆ ಎಂದು ತಿಳಿಸಿದರು.

ಆರ್‌ಎಸ್‌ ಗೀತೆ ಹಾಡಿದ ವಿಚಾರದಲ್ಲಿ ರಾಜಕೀಯ ಮಾಡುವವರು ಮಾಡಲಿ. ಇಲ್ಲಿಗೆ ಈ ವಿಚಾರ ತೆರೆ ಎಳೆಯೋಣ. ರಾಹುಲ್ ಗಾಂಧಿ ಏನು ಕೇಳಿಲ್ಲ.ಯಾರು ಕೇಳಿಲ್ಲ‌. ಯಾರು ಮಾತನಾಡಿಲ್ಲ ಎಂದು ತಿಳಿಸಿದರು.


Spread the love

LEAVE A REPLY

Please enter your comment!
Please enter your name here