ಬೆಂಗಳೂರು:- SSLC, PUC ವಿದ್ಯಾರ್ಥಿಗಳಿಗೆ 3ನೇ ಪರೀಕ್ಷೆ ರದ್ದು ಎಂಬ ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉತ್ತೀರ್ಣ ಅಂಕಗಳನ್ನು ಶೇ.35 ರಿಂದ ಶೇ.33ಕ್ಕೆ ಇಳಿಸಿದ ಶಿಕ್ಷಣ ಇಲಾಖೆ, ಇದೀಗ ಪರೀಕ್ಷಾ ವಿಧಾನದಲ್ಲಿಯೂ ಮಾರ್ಪಾಡು ಮಾಡಿದೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿದ್ದವು. ಈ ಸುಳ್ಳು ಸುದ್ದಿಯಿಂದ ಕೆಂಡಾಮಂಡಲವಾಗಿರುವ ಮಧು ಬಂಗಾರಪ್ಪ, ಪರೀಕ್ಷಾ ವಿಧಾನದಲ್ಲಿ ಬದಲಾವಣೆ ಇಲ್ಲ. ವಿದ್ಯಾರ್ಥಿಗಳಿಗೆ ಯಾವುದೇ ಗೊಂದಲ ಬೇಡ. ಈ ವರ್ಷವೂ ಮೂರು ಎಕ್ಸ್ಂ ಮಾಡಲ್ ಇದ್ದೆ ಇರುತ್ತೆ ಎಂದು ಹೇಳಿದ್ದಾರೆ. ಕಳೆದ ವರ್ಷದಂತೆ ಈ ವರ್ಷವೂ SSLC-PUC ಗೆ ಮೂರು ಪರೀಕ್ಷೆ ನಡೆಸುತ್ತೇವೆ.
ಮೂರು ಪರೀಕ್ಷೆಗಳ ವಿಚಾರದಲ್ಲಿ ಕೆಲವರು ಗೊಂದಲ ಯಾಕೆ ಸೃಷ್ಟಿಸುತ್ತಿದ್ದಾರೆಂದು ತಿಳಿಯುತ್ತಿಲ್ಲ. ಅವರಿಗೆ ತಿಳವಳಿಕೆ ಇರುತ್ತದೆಯೋ ಇಲ್ಲವೋ ಗೊತ್ತಿಲ್ಲ. ಯಾವುದೇ ಪರೀಕ್ಷೆಯ ವಿಧಾನದ ಬದಲಾವಣೆಯನ್ನು ನಮ್ಮ ಇಲಾಖೆಯಿಂದ ಹೊರಡಿಸಬೇಕು. ಮೂರು ಎಕ್ಸಾಂ ಮಾಡಲ್ನಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಯಾರೋ ಹೇಳಿದರು ಎಂದು ಸುದ್ದಿ ಮಾಡಬೇಡಿ. ಬದಲಾವಣೆ ಇದ್ದರೆ ಚರ್ಚೆ ಮಾಡಬೇಕಾಗುತ್ತದೆ. ಚರ್ಚೆ ಮಾಡಿಯೇ ಬದಲಾವಣೆ ಮಾಡುತ್ತೇವೆ. ಮಾಧ್ಯಮಗಳು ಸುಳ್ಳು ಸುದ್ದಿ ಹಬ್ಬಿಸುವುದನ್ನು ನಿಲ್ಲಿಸಬೇಕು ಎಂದಿದ್ದಾರೆ.



