ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ) ಬೆಂಗಳೂರು, ಗದಗ ಗ್ರಾಮೀಣ ಘಟಕದ 2026-2031ನೇ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆಗಾಗಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಸ್.ಆರ್. ಬಂಡಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಪ್ರಧಾನ ಕಾರ್ಯದರ್ಶಿಯಾಗಿ ಎನ್.ಎಚ್. ಪಾಟೀಲ, ಕೋಶಾಧ್ಯಕ್ಷರಾಗಿ ಎಸ್.ಎಸ್. ಲಕ್ಷಕೊಪ್ಪ, ಉಪಾಧ್ಯಕ್ಷರಾಗಿ ಎಸ್.ಪಿ. ಕುರಿ ಹಾಗೂ ಶ್ರೀಮತಿ ಎಸ್.ಡಿ. ಗುಂಜಳ ಆಯ್ಕೆಯಾಗಿದ್ದಾರೆ.
ಸಹ ಕಾರ್ಯದರ್ಶಿಗಳಾಗಿ ಎಸ್.ಎಂ. ಉಜ್ಜಣ್ಣವರ ಮತ್ತು ಶ್ರೀಮತಿ ಎನ್.ಆರ್. ಶೈಲಾ, ಸಂಘಟನಾ ಕಾರ್ಯದರ್ಶಿಗಳಾಗಿ ಬಿ.ವಾಯ್. ಹುಡೇದಮನಿ ಹಾಗೂ ಶ್ರೀಮತಿ ಎಸ್.ಎನ್. ಅನ್ಸಾರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಗದಗ ಗ್ರಾಮೀಣ ಘಟಕದ ಮುಖ್ಯ ಚುನಾವಣಾಧಿಕಾರಿ ವ್ಹಿ.ಎಂ. ಪಾಟೀಲ ತಿಳಿಸಿದ್ದಾರೆ.
ಅವಿರೋಧವಾಗಿ ಆಯ್ಕೆಯಾದ ಎಲ್ಲ ಪದಾಧಿಕಾರಿಗಳಿಗೆ ಗದಗ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದು, ಇವರ ಅಧಿಕಾರದ ಅವಧಿಯಲ್ಲಿ ಸಂಘದ ಅಭಿವೃದ್ಧಿಗೆ ಉತ್ತಮ ಕಾರ್ಯಗಳು ನಡೆಯಲಿ ಎಂದು ಶುಭ ಹಾರೈಸಿದ್ದಾರೆ.



