ಹೈಕಮಾಂಡ್ ಸೂಚನೆ ಮೇರೆಗೆ ಸದಾನಂದಗೌಡ ನಿವೃತ್ತಿ ಘೋಷಣೆ: ಬಿ.ಎಸ್.ಯಡಿಯೂರಪ್ಪ

0
Spread the love

ಬೆಂಗಳೂರು: ಚುನಾವಣಾ ರಾಜಕೀಯದಿಂದ ಡಿ.ವಿ.ಸದಾನಂದಗೌಡ ನಿವೃತ್ತಿ ವಿಚಾರ ಸಂಬಂಧ ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಹೈಕಮಾಂಡ್ ಸೂಚನೆ ಮೇರೆಗೆ ಸದಾನಂದಗೌಡ ನಿವೃತ್ತಿ ಘೋಷಣೆ ಮಾಡಿದ್ದಾರೆ. ಸಂಸದ ಡಿ.ವಿ.ಸದಾನಂದಗೌಡಗೆ ಹೈಕಮಾಂಡ್​​​ ಸೂಚನೆ ಕೊಟ್ಟಿದೆ.

Advertisement

ಪಕ್ಷದ ಕೆಲಸಗಳಲ್ಲಿ ಸಕ್ರಿಯರಾಗಿ ಇರಲು ಹೈಕಮಾಂಡ್​ ಹೇಳಿದೆ. ಚುನಾವಣೆಗೆ ನಿಲ್ಲದಂತೆ ಸದಾನಂದಗೌಡಗೆ ಹೈಕಮಾಂಡ್​ ಸೂಚಿಸಿದೆ ಎಂದು ತಿಳಿಸಿದರು. ಪಕ್ಷದ ಬಗ್ಗೆ ಎಸ್.ಟಿ.ಸೋಮಶೇಖರ್ ಹೇಳಿಕೆ ಕುರಿತು ಮಾತನಾಡಿ, ಸೋಮಶೇಖರ್ ಬಳಿ ಮಾತಾಡಿದ್ದೇನೆ. ಅವರು ಪಕ್ಷ ಬಿಟ್ಟು ಹೋಗಲ್ಲ. ಅಸಮಾಧಾನ ಇದ್ದರೆ ಮಾತಾಡಿ ಸರಿಪಡಿಸ್ತೇನೆ ಎಂದು ತಿಳಿಸಿದರು.


Spread the love

LEAVE A REPLY

Please enter your comment!
Please enter your name here