ವಿಜಯಸಾಕ್ಷಿ ಸುದ್ದಿ, ಗದಗ: ಐಐ.ಒ ಸ್ನಾತಕೋತ್ತರ ಪದವಿಯಲ್ಲಿ ಗೋಲ್ಡ್ ಮೆಡಲ್ನೊಂದಿಗೆ ರಾಜ್ಯಕ್ಕೆ ಮೊದಲ ರ್ಯಾಂಕ್ ಪಡೆದು ಗದಗಿನ ಶಿಕ್ಷಣ ಕ್ಷೇತ್ರದ ಗರಿಮೆಯನ್ನು ಹೆಚ್ಚಿಸಿರುವ ಸಹನಾ ಅನಂತ ಕಾರ್ಕಳವರ ದಾಖಲೆಯ ಸಾಧನೆ ನಮಗೆಲ್ಲ ಹೆಮ್ಮೆ ತಂದಿದೆ ಎಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಬಸವರಾಜ ಬಳ್ಳಾರಿ ಪ್ರಶಂಸೆ ವ್ಯಕ್ತಪಡಿಸಿದರು.
ಐಐ.ಒದಲ್ಲಿ ಗೋಲ್ಡ್ ಮೆಡಲ್ನೊಂದಿಗೆ ರಾಜ್ಯಕ್ಕೆ ಮೊದಲ ರ್ಯಾಂಕ್ ಪಡೆದಿರುವ ಸಹನಾ ಅನಂತ ಕಾರ್ಕಳ ಅವರನ್ನು ರಾಜ್ಯ ಸರಕಾರಿ ನೌಕರರ ಸಂಘದ ಪರವಾಗಿ ಸಂಘದ ಕಚೇರಿಯಲ್ಲಿ ಸನ್ಮಾನಿಸಿ ಅವರು ಮಾತನಾಡಿದರು.
ರಾಜ್ಯ ಸರಕಾರಿ ನೌಕರರ ಸಂಘದ ನಿಕಟಪೂರ್ವ ಉಪಾಧ್ಯಕ್ಷ ಡಾ. ರವಿ ಎಲ್. ಗುಂಜೀಕರ ಮಾತನಾಡಿ, ಸಹನಾ ಅನಂತ ಕಾರ್ಕಳ ಕಾನೂನು ಪದವೀಧರ ಕಲಿಕಾರ್ಥಿಗಳಿಗೆ ಮಾದರಿಯಾಗಿದ್ದಾರೆ ಎಂದರು.
ವೇದಿಕೆಯ ಮೇಲಿದ್ದ ಜಿಲ್ಲಾ ನೌಕರರ ಸಂಘದ ಹಿರಿಯ ಉಪಾಧ್ಯಕ್ಷ ಡಿ.ಎಸ್. ದುರ್ಗಣ್ಣವರ, ರಾಜು ಕಂಟೆಗಣ್ಣನವರ, ಹಿರಿಯ ಪತ್ರಕರ್ತ ಜಗದೀಶ ಕುಲಕರ್ಣಿ, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ರಾಜು ಹೆಬ್ಬಳ್ಳಿ, ಪ್ರಧಾನ ಕಾರ್ಯದರ್ಶಿ ಶರಣು ದೊಡ್ಡೂರ, ರಾಜ್ಯ ಕಾರ್ಯಕಾರಿಣಿ ಸದಸ್ಯ ಅರುಣಕುಮಾರ ಹಿರೇಮಠ, ಸಂಘದ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಆನಂದಯ್ಯ ವಿರಕ್ತಮಠ, ನ್ಯಾಯವಾದಿ ಟಿ.ಎನ್. ಭಾಂಡಗೆ, ಪತ್ರಕರ್ತ ಆನಂದ ಸಾಲಿಗ್ರಾಮ, ಹಿರಿಯ ಪತ್ರಕರ್ತ ಅನಂತ ಎಸ್. ಕಾರ್ಕಳ, ಏಪಿಎಂಸಿ ಡೆಪ್ಯೂಟಿ ಮ್ಯಾನೇಜರ್ ಮಂಗಳಾ ಅನಂತ ಕಾರ್ಕಳ, ನಿವೃತ್ತ ನೌಕರರಾದ ಮಕಾನಾದರ ಮುಂತಾದವರು ಶುಭ ಹಾರೈಸಿದರು.
ಸಮಾರಂಭದಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ರಾಜು ಹೆಬ್ಬಳ್ಳಿ, ಪ್ರಧಾನ ಕಾರ್ಯದರ್ಶಿ ಶರಣು ದೊಡ್ಡೂರ, ಅರುಣಕುಮಾರ ಹಿರೇಮಠ, ಆನಂದಯ್ಯ ವಿರಕ್ತಮಠ, ಆನಂದ ಸಾಲಿಗ್ರಾಮ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮವನ್ನು ನೌಕರರ ಸಂಘದ ಹಿರಿಯ ಉಪಾಧ್ಯಕ್ಷ ಸಂಜೀವಕುಮಾರ ಕುಂದಗೋಳ ಸ್ವಾಗತಿಸಿದರು. ಕಾರ್ಯದರ್ಶಿ ಮುತ್ತು ಮಲಕಶೆಟ್ಟಿ ನಿರೂಪಿಸಿದರು. ಕಚೇರಿ ವ್ಯವಸ್ಥಾಪಕ ಕರೀಮಸಾಬ ಸುಣಗಾರ ವಂದಿಸಿದರು.
ಸಹನಾ ಅನಂತ ಕಾರ್ಕಳ ರಾಜ್ಯ ಸರಕಾರಿ ನೌಕರರ ಸಂಘದಿಂದ ಸನ್ಮಾನ ಸ್ವೀಕರಿಸಿ ಮಾತನಾಡಿ, ಇಷ್ಟಪಟ್ಟು ಕಲಿತರೆ ಯಾವುದೂ ಕಷ್ಟವಾಗಲಾರದು. ಸಾಧನೆ ಯಾರ ಸ್ವತ್ತಲ್ಲ. ಸಾಧಿಸುವ ಛಲ ಇರಬೇಕೆಂದರಲ್ಲದೆ, ಪ್ರತಿಭೆಗಳನ್ನು ಹುಡುಕಿ ಪ್ರೋತ್ಸಾಹಿಸುವ ಕೆಲಸವಾಗಬೇಕಿದೆ. ತಮ್ಮ ಸಾಧನೆಯನ್ನು ಗುರುತಿಸಿದ ರಾಜ್ಯ ಸರಕಾರಿ ನೌಕರರ ಸಂಘ ತಮಗೆ ಸನ್ಮಾನಿಸಿ ಗೌರವಿಸಿದ್ದಕ್ಕೆ ನಾನು ಋಣಿಯಾಗಿದ್ದೇನೆ ಎಂದರು.



