HomeIndia Newsಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ಪ್ರಮಾಣವಚನ ಸ್ವೀಕಾರ

ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ಪ್ರಮಾಣವಚನ ಸ್ವೀಕಾರ

For Dai;y Updates Join Our whatsapp Group

Spread the love

ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಸಂಜೀವ್‌ ಖನ್ನಾ ಅವರನ್ನು ನೇಮಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆದೇಶ ಹೊರಡಿಸಿದ್ದರು. ಆದ್ದರಿಂದ ಇಂದು ಭಾರತದ 51 ನೇ ಮುಖ್ಯ ನ್ಯಾಯಮೂರ್ತಿಯಾಗಿ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾ.ಖನ್ನಾ ಅವರಿಗೆ ಪ್ರಮಾಣ ವಚನ ಬೋಧಿಸಿದರು.

ನ್ಯಾ.ಖನ್ನಾ ಅವರ ಹೆಸರನ್ನು ನ್ಯಾ.ಡಿವೈ ಚಂದ್ರಚೂಡ್ ಅವರು ಶಿಫಾರಸು ಮಾಡಿದ್ದರು. ಇವರು ಮುಂದಿನ ವರ್ಷ ಮೇ 13 ರವರೆಗೆ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ನ್ಯಾ.ಚಂದ್ರಚೂಡ್ ಅವರು ನ.10 ರಂದು ಹುದ್ದೆಯಿಂದ ನಿವೃತ್ತರಾದರು.

ಪ್ರಮಾಣವಚನ ಸ್ವೀಕಾರದ ವೇಳೆ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಜಗದೀಪ್ ಧಂಖರ್, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಮಾಜಿ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಉಪಸ್ಥಿತರಿದ್ದರು.

ಮೇ 14, 1960 ರಲ್ಲಿ ಜನಿಸಿದ್ದ ನ್ಯಾ.ಸಂಜೀವ್ ಖನ್ನಾ ಅವರು, ದೆಹಲಿ ವಿಶ್ವವಿದ್ಯಾಲಯದಲ್ಲಿ ಕಾನೂನು ಅಧ್ಯಯನ ಮಾಡಿದ್ದರು. ಕೆಲವು ಕಾಲ ವಕೀಲರಾಗಿ, ದೆಹಲಿ ಹೈಕೋರ್ಟ್‌ನ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೇ ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ಜನವರಿ 2019 ರಲ್ಲಿ ಸುಪ್ರೀಂ ಕೋರ್ಟ್‌ ನ್ಯಾಯಾಧೀಶರಾಗಿ ನೇಮಕಗೊಂಡರು. ಈ ಅವಧಿಯಲ್ಲಿ, ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಅವರ ಜಾಮೀನು ಅರ್ಜಿಗಳ ವಿಚಾರಣೆ ಸೇರಿದಂತೆ ಹಲವಾರು ರಾಜಕೀಯವಾಗಿ ಸೂಕ್ಷ್ಮ ಪ್ರಕರಣಗಳ ಪೀಠಗಳ ನೇತೃತ್ವ ವಹಿಸಿದ್ದರು. ಸಂವಿಧಾನ ಪೀಠದ ಭಾಗವಾಗಿ, ನ್ಯಾ.ಖನ್ನಾ ಅವರು ಆರ್ಟಿಕಲ್ 370ರ ರದ್ದು ಮತ್ತು ಚುನಾವಣಾ ಬಾಂಡ್‌ಗಳ ಪ್ರಕರಣ ಸೇರಿದಂತೆ ಹಲವಾರು ತೀರ್ಪುಗಳಿಗೆ ಕೊಡುಗೆ ನೀಡಿದ್ದಾರೆ.

 


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!