ವಿಜಯಸಾಕ್ಷಿ ಸುದ್ದಿ, ಗದಗ: ಪರಿಸರವನ್ನು ಸಂರಕ್ಷಿಸುವ ಅಗತ್ಯತೆಯ ಬಗ್ಗೆ ಸಾಮಾಜಿಕವಾಗಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಇನ್ನರ್ವೀಲ್ ಕ್ಲಬ್ ಗದಗ-ಬೆಟಗೇರಿ ವತಿಯಿಂದ ಬೆಟಗೇರಿಯ ಸರಕಾರಿ ಐಟಿಐ ಕಾಲೇಜಿನಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕ್ಲಬ್ನ ಅಧ್ಯಕ್ಷರಾದ ಅಶ್ವಿನಿ ಜಗತಾಪ, ಸಸಿಗಳನ್ನು ನೆಡುವ ಮತ್ತು ಬೆಳೆದು ನಿಂತ ಮರಗಳನ್ನು ಉಳಿಸಿಕೊಳ್ಳುವ ಅವಶ್ಯಕತೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿ, ಪರಿಸರದ ಸಮತೋಲನವನ್ನು ಕಾಪಾಡುವುದರಲ್ಲಿ ಸಸ್ಯಗಳ ಪಾತ್ರವನ್ನು ವಿವರಿಸಿದರು.
ಕಾಲೇಜಿನ ಪ್ರಾಂಶುಪಾಲ ಡಾ. ಬಸವರಾಜ ಮಲ್ಲೂರ ಪರಿಸರ ಸಂರಕ್ಷಣೆಯ ಅಡಿಯಲ್ಲಿ ಯಾವ ಯಾವ ಕಾರ್ಯಕ್ರಮಗಳನ್ನು ಕೈಗೊಳ್ಳಬಹುದು ಮತ್ತು ಪರಿಸರ ಸಂರಕ್ಷಣೆಯಲ್ಲಿ ನಮ್ಮ ಪಾತ್ರವೇನು ಎಂಬುದನ್ನು ತಿಳಿಸಿದರು. ಕಾಲೇಜಿನ ಉಪನ್ಯಾಸಕರಾದ ಸುನಿತಾ ಬುರಡಿ ಪರಿಸರವನ್ನು ರಕ್ಷಿಸಲು ಇರುವ ಹಲವು ಮಾರ್ಗಗಳನ್ನು ವಿವರಿಸಿದರು.
ಇನ್ನರ್ವೀಲ್ ಕ್ಲಬ್ನ ಕಾರ್ಯದರ್ಶಿ ಶಿವಲೀಲಾ ಅಕ್ಕಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಹಾಗೂ ಇನ್ನರ್ ವೀಲ್ ಕ್ಲಬ್ನ ಐಎಸ್.ಓ ಪೂಜಾ ಭೂಮಾ, ಎಡಿಟರ್ ವೀಣಾ ಕಾವೇರಿ, ಸಿಪಿಸಿಸಿ ಮೀನಾಕ್ಷಿ ಕೊರವಣ್ಣವರ್, ಅನ್ನಪೂರ್ಣ ವರವಿ, ಜಯಶ್ರೀ ಉಗಲಾಟ, ಆಶಾ ಪಟ್ಟಣಶೆಟ್ಟಿ, ಮಂಜುಳಾ ಅಕ್ಕಿ, ಸ್ಮಿತಾ ಹೊಸೂರ್ ಉಪಸ್ಥಿತರಿದ್ದರು.