HomeGadag Newsಅರುಣೋದಯ ಶಾಲೆಯಲ್ಲಿ ಸರಸ್ವತಿ ಪೂಜೆ

ಅರುಣೋದಯ ಶಾಲೆಯಲ್ಲಿ ಸರಸ್ವತಿ ಪೂಜೆ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ : ಗದುಗಿನ ಸೇವಾ ಭಾರತಿ ಟ್ರಸ್ಟ್ ನ ಅರುಣೋದಯ ವಿಶೇಷ ಅಗತ್ಯತೆಯುಳ್ಳ ಮಕ್ಕಳ ಶಾಲೆಯಲ್ಲಿ ಮಂಗಳವಾರ ಮಹಾಸರಸ್ವತಿ ಪೂಜಾ ಸಮಾರಂಭವನ್ನು ಏರ್ಪಡಿಸಲಾಗಿತ್ತು.
ಶಾಲಾ ಆಡಳಿತ ಮಂಡಳಿಯ ಉಪಾಧ್ಯಕ್ಷ ಲುಕ್ಕಣಸಾ ರಾಜೋಳಿ, ಕಾರ್ಯದರ್ಶಿ ಜಯರಾಜ ಮುಳಗುಂದ, ಕೋಶಾಧ್ಯಕ್ಷ ಜಿತೇಂದ್ರ ಶಹಾ, ಸದಸ್ಯರಾದ ಬಸವರಾಜ ಪಟ್ಟಣಶೆಟ್ಟಿ ಪೂಜಾ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ಪೂಜಾ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಎಲ್ಲ ಮಕ್ಕಳಿಗೆ ಹಣ್ಣು-ಹಂಪಲು, ಸಿಹಿ ತಿಂಡಿಗಳನ್ನು ವಿತರಿಸಿ ಶುಭ ಕೋರಲಾಯಿತು. ಶಾಲಾ ಮುಖ್ಯೋಪಾಧ್ಯಾಯ ಸೇರಿದಂತೆ ಶಾಲೆಯ ಶಿಕ್ಷಕರು, ಸಿಬ್ಬಂದಿ ವರ್ಗ, ಪಾಲಕ-ಪೋಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

E-Paper

E-paper

Must Read

spot_img