ಸತೀಶ್ ಜಾರಕಿಹೊಳಿ, ಕುಮಾರಸ್ವಾಮಿ ಭೇಟಿ ವಿಚಾರ: ಡಿ.ಕೆ. ಶಿವಕುಮಾರ್ ಹೇಳಿದ್ದೇನು..?

0
Spread the love

ದೆಹಲಿ: ಸತೀಶ್ ಜಾರಕಿಹೊಳಿ, ಕುಮಾರಸ್ವಾಮಿ ಭೇಟಿ ಬಗ್ಗೆ ನನಗೆ ಗೊತ್ತಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ರಾಜ್ಯ ಸಚಿವ ಸತೀಶ್ ಜಾರಕಿಹೊಳಿ ಅವರು ದೆಹಲಿಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿರುವ ವಿಚಾರವಾಗಿ ಮಾತನಾಡಿದ ಅವರು, ನನಗೆ ಈ ವಿಚಾರವಾಗಿ ಏನೂ ಗೊತ್ತಿಲ್ಲ,

Advertisement

ಅವರ ಬಳಿಯೇ ಕೇಳಿ. ಅವರು ಮಾತುಕತೆ ನಡೆಸಿರುವ ಬಗ್ಗೆ ನನ್ನನ್ನು ಕೇಳಿದರೆ ನಾನು ಏನು ಹೇಳಲಿ? ಅವರ ಭೇಟಿ ವಿಚಾರವಾಗಿ ನನಗಾಗಲಿ, ಸಿಎಂ ಅವರಿಗಾಗಲಿ ಮಾಹಿತಿ ನೀಡಿಲ್ಲ. ಇಲ್ಲಿ ಪಕ್ಷದ ವಿಚಾರ ಏನೂ ಇರುವುದಿಲ್ಲ. ರಾಷ್ಟ್ರೀಯ ಯೋಜನೆಗಳ ಬಗ್ಗೆ ಚರ್ಚೆ ಮಾಡಿರಬಹುದು. ಅವರಿಗೆ ಗೌರವ ಸಲ್ಲಿಸಲು ಹೋಗಿರಬಹುದು” ಎಂದು ತಿಳಿಸಿದರು.

ಬಿಜೆಪಿ ಪಕ್ಷದಿಂದ ಯತ್ನಾಳ್ ಅವರನ್ನು ಉಚ್ಛಾಟನೆ ಮಾಡಿರುವ ಬಗ್ಗೆ ಕೇಳಿದಾಗ, “ಅದು ಅವರ ಪಕ್ಷದ ಆಂತರಿಕ ವಿಚಾರ, ಅವರು ಏನಾದರೂ ಮಾಡಿಕೊಳ್ಳಲಿ. ನಾವು ಅದರಲ್ಲಿ ಯಾಕೆ ಹಸ್ತಕ್ಷೇಪ ಮಾಡಬೇಕು. ಅವರು ತಮ್ಮ ಮುತ್ತುರತ್ನಗಳನ್ನು ಎಲ್ಲೆಲ್ಲಿ ಇಟ್ಟುಕೊಳ್ಳಬೇಕೋ ಅಲ್ಲಿ ಇಟ್ಟುಕೊಳ್ಳಲಿ ಎಂದರು. ಸಚಿವ ಸಂಪುಟ ಸಭೆಯಲ್ಲಿ ಹನಿಟ್ರ್ಯಾಪ್ ವಿಚಾರ ಪ್ರಸ್ತಾಪವಾಗಲಿದೆಯಂತೆ ಎಂದು ಕೇಳಿದಾಗ, “ನನಗೆ ಗೊತ್ತಿಲ್ಲ. ನಾನು ಸಿಎಂ ಅವರಿಗೆ ಕರೆ ಮಾಡಿ ಪಕ್ಷದ ಸಭೆ ಇದೆ ಎಂದು ಹೇಳಿ ದೆಹಲಿಗೆ ಬಂದಿದ್ದೇನೆ” ಎಂದು ತಿಳಿಸಿದರು.

 


Spread the love

LEAVE A REPLY

Please enter your comment!
Please enter your name here