ಸೌಜನ್ಯ ತಾಯಿಯನ್ನು ವಿಚಾರಣೆಗೆ ಒಳಪಡಿಸಬೇಕು: ಸೂಲಿಬೆಲೆ ಆಗ್ರಹ!

0
Spread the love

ಬೆಂಗಳೂರು:- ಧರ್ಮಸ್ಥಳದ ಸೌಜನ್ಯ ತಾಯಿಯನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ಚಕ್ರವರ್ತಿ ಸೂಲಿಬೆಲೆ ಆಗ್ರಹ ಮಾಡಿದ್ದಾರೆ.

Advertisement

ಈ ಸಂಬಂಧ ಮಾತನಾಡಿದ ಸೂಲಿಬೆಲೆ, ಸೌಜನ್ಯ ತಾಯಿ ಕುಸುಮಾವತಿ ಅವರನ್ನು ವಿಚಾರಣೆಗೆ ಒಳಪಡಿಸಬೇಕು. ಸುಜಾತ ಭಟ್‌ ಅವರನ್ನು ಹೇಗೆ ಈ ಗುಂಪು ಷಡ್ಯಂತ್ರ ಮಾಡಿ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡಿತ್ತು. ಹೆಣ್ಣು ಮಕ್ಕಳ ವಿಚಾರ ಬಂದಾಗ ಸಮಾಜ ಬೇಗ ಕರಗುತ್ತದೆ. ಈ ಗುಂಪು ಇದನ್ನೇ ಗುರಾಣಿಯನ್ನಾಗಿ ಇಟ್ಟುಕೊಂಡು ಸುಜಾತ ಭಟ್‌ ಅವರನ್ನು ಮುಂದಿರಿಸಿ ದಿನೇ ದಿನೇ ಕಥೆ ಕಟ್ಟುತ್ತಿದ್ದರು ಎಂದು ಹೇಳಿದರು.

ಸೌಜನ್ಯ ಮೇಲೆ ಅತ್ಯಾಚಾರವಾಗಿದೆ. ಆ ಹೆಣ್ಣು ಮಗಳಿಗೆ ನ್ಯಾಯ ಸಿಗಬೇಕು. ಅತ್ಯಾಚಾರ ಮಾಡಿದವರು ಜೈಲಿಗೆ ಹೋಗಬೇಕು ಎಂದು ನಾನು ಆಗ್ರಹ ಮಾಡುತ್ತೇನೆ. ಈ ಬದ್ಧತೆಯನ್ನು ಇಟ್ಟುಕೊಂಡೇ ನಾನು ಮಾತನಾಡುತ್ತಿದ್ದೇನೆ. ಈಗ ಹೇಗೆ ಮಾಸ್ಕ್‌ ಮ್ಯಾನ್, ಸುಜತಾ ಭಟ್‌ ಹೇಗೆ ಷಡ್ಯಂತ್ರದ ಭಾಗವಾಗಿದ್ದಾರೋ ಅದೇ ರೀತಿ ಸೌಜನ್ಯ ತಾಯಿ ಕುಸುಮಾವತಿ ಕೂಡ ಯಾವುದೋ ಷಡ್ಯಂತ್ರದ ಭಾಗವಾಗಿರುವುದು ಮೆಲ್ನೋಟಕ್ಕೆ ಗೊತ್ತಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.


Spread the love

LEAVE A REPLY

Please enter your comment!
Please enter your name here