ಸಾವಿತ್ರಿಬಾಯಿ ಫುಲೆ ಅದರ್ಶ ಶಿಕ್ಷಕಿ

0
Spread the love

ವಿಜಯಸಾಕ್ಷಿ ಸುದ್ದಿ, ಮುಳಗುಂದ: ಅಕ್ಷರದ ಅವ್ವ ಎಂದೇ ಖ್ಯಾತಿ ಗಳಿಸಿರುವ ಸಾವಿತ್ರಿಬಾಯಿ ಫುಲೆ ಎಲ್ಲರಿಗೂ ಆದರ್ಶ ಶಿಕ್ಷಕಿಯಾಗಿದ್ದಾರೆ ಎಂದು ಶೋಭಾ ಪಾಟೀಲ್ ಹೇಳಿದರು.
ಅವರು ಪಟ್ಟಣದ ಸರಕಾರಿ ಮಾದರಿ ಹೆಣ್ಣು ಮಕ್ಕಳ ಶಾಲೆಯಲ್ಲಿ ಸಾವಿತ್ರಿಬಾಯಿ ಫುಲೆ ಅವರ 194ನೇ ಜನ್ಮದಿನಾಚರಣೆ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿ, ಹೆಣ್ಣು ಮಕ್ಕಳು ಹೊಸ್ತಿಲು ದಾಟದ ಕಾಲ ಘಟ್ಟದಲ್ಲಿ ಅವರ ಶೈಕ್ಷಣಿಕ ದೃಷ್ಟಿಯಿಂದ ಹೋರಾಟ ಮಾಡಿ ಸ್ತ್ರೀಯರ ಶಿಕ್ಷಣ, ಸಾಮಾಜಿಕ ನ್ಯಾಯದ ಕುರಿತು ಹೊಸತನ ಕಂಡುಕೊಳ್ಳುವ ಪ್ರಯತ್ನ ಮಾಡಿದರು. ಈ ಕಾರಣದಿಂದ ಭಾರತದ ಮೊದಲ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಅವರನ್ನು ಸ್ಮರಿಸಬೇಕಾಗಿದೆ ಎಂದರು.
ಶಾಲಾ ಪ್ರಧಾನ ಗುರು ಸಂಗಮೇಶ ತಮ್ಮನಗೌಡರ, ಪಿ.ಎಸ್. ಮರಿದೇವರಮಠ, ಆರ್.ಎಂ. ರೋಣದ, ಎಸ್.ಪಿ. ಸರ್ವದೆ, ಕೆ.ಎಸ್. ಗಾಣಿಗೇರ, ಬಸಮ್ಮಾ ಲದ್ದಿ ಇದ್ದರು.

Advertisement

 


Spread the love

LEAVE A REPLY

Please enter your comment!
Please enter your name here