HomeGadag Newsಶಾಲಾ ಅಭಿವೃದ್ಧಿ ಕಾರ್ಯಕ್ಕೆ ಮೆಚ್ಚುಗೆ : ವಿ.ವಿ. ನಡುವಿನಮನಿ

ಶಾಲಾ ಅಭಿವೃದ್ಧಿ ಕಾರ್ಯಕ್ಕೆ ಮೆಚ್ಚುಗೆ : ವಿ.ವಿ. ನಡುವಿನಮನಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ : ಪಾಲಕರು ತಮಗೆ ಎಷ್ಟೇ ಕೆಲಸದ ಒತ್ತಡ ಇದ್ದರೂ ಸಹ ಪ್ರತಿನಿತ್ಯ ಮಕ್ಕಳ ಶಿಕ್ಷಣ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದನ್ನು ಮರೆಯಬಾರದು ಎಂದು ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ. ನಡುವಿನಮನಿ ಹೇಳಿದರು.

ಅವರು ತಾಲೂಕಿನ ಅಡವಿ ಸೋಮಾಪೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ಪ್ರಾರಂಭೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದರು.

ಶಾಲಾ ಆರಂಭದ ದಿನದಂದು ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಶಾಲೆಗೆ ಆಗಮಿಸಿದ್ದಕ್ಕೆ ಸಂತಸ ವ್ಯಕ್ತಪಡಿಸಿದ ಅವರು, ಶಾಲಾ ಅಭಿವೃದ್ಧಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಮಕ್ಕಳನ್ನು ಶಾಲೆಯತ್ತ ಸೇಳೆಯಲು ತಳಿರು-ತೋರಣಗಳಿಂದ ಶೃಂಗರಿಸಿ, ಆಕರ್ಷಕವಾಗಿ ವಿವಿಧ ಚಟುವಟಿಕೆಗಳನ್ನು ಮಾಡಲಾಗಿತ್ತು. ಮಕ್ಕಳಿಗೆ ಸಮವಸ್ತ್ರ, ಪಠ್ಯಪುಸ್ತಕ ವಿತರಿಸುವ ಜೊತೆಗೆ ಮಕ್ಕಳಿಗೆ ಸಿಹಿ ವಿತರಿಸಿ, ನಂತರ ಸಸಿ ನಡೆಲಾಯಿತು.

ಗದಗ ಡಯಟ್ ಉಪನ್ಯಾಸಕ ಶಂಕರ ಹಡಗಲಿ, ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಸಿ.ಜಿ. ಶಿವಶಿಂಪಿಗೇರ, ಹಿರಿಯರಾದ ಲೆಂಕೆಪ್ಪ ಹೊಸಳ್ಳಿ, ರಮಜಾಸಾಬ ಹುಯಿಲಗೋಳ, ಎಸ್‌ಡಿಎಂಸಿ ಅಧ್ಯಕ್ಷ ಗಿರೀಶ ದೊಡ್ಡಮನಿ ಹಾಗೂ ಸದಸ್ಯರು, ಪ್ರಧಾನ ಶಿಕ್ಷಕಿ ಎಸ್.ಆರ್. ಮಟ್ಟಿ, ಶಿಕ್ಷಕರು ಇದ್ದರು.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!