ಭದ್ರತೆ ಸವಾಲು.. ಮಂಡ್ಯ KRS ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ..!

0
Spread the love

ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನ ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಅಪರಿಚಿತ ಯುವಕರು ಓಡಾಡುತ್ತ ಸೆಲ್ಫಿ ವಿಡಿಯೋ ಮಾಡಿ ಹುಚ್ಚಾಟ ಮೆರೆದಿರುವಂತಹ ಘಟನೆ ನಡೆದಿದೆ. ಬಿಗಿ ಭದ್ರತೆ ಇದ್ರೂ ಇಲ್ಲಿಗೆ ಬಂದಿದ್ದೇವೆ ಎಂದು ಯುವಕ ವಿಡಿಯೋದಲ್ಲಿ ಹೇಳಿದ್ದಾನೆ.

Advertisement

ಹೌದು ಡ್ಯಾಂ ಸೆಕ್ಯುರಿಟಿಗೆ ಸರ್ಕಾರ ಕೋಟಿ ಕೋಟಿ ಖರ್ಚು ಮಾಡಿದರೂ ಅಭದ್ರತೆಯ ಮಾತು ಕೇಳಿಬರುತ್ತಿದೆ. ಜಲಾಶಯದ ಸೂಕ್ಷ್ಮ ಪ್ರದೇಶದಲ್ಲಿ ಅಪರಿಚಿತ ಯುವಕರ ಹುಚ್ಚಾಟ ಮೆರೆದಿದ್ದಾರೆ. ಬಿಗಿ ಬಂದೋಬಸ್ತ್ ಇದ್ದರೂ ಇಲ್ಲಿಗೆ ಬಂದಿದ್ದೇವೆ ಎಂದು ಯುವಕರ ಹುಚ್ಚಾಟ ಆಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಇದರ ವೀಡಿಯೋ ವೈರಲ್ ಆಗಿದೆ. ಕೆಆರ್‌ಎಸ್ ಡ್ಯಾಂ ಭದ್ರತಾ ವೈಫಲ್ಯದ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ. ಕೈಗಾರಿಕಾ ಭದ್ರತಾ ಪಡೆಯ ಕಾರ್ಯವೈಖರಿ ಬಗ್ಗೆ ಅನುಮಾನ ಮೂಡಿದೆ.


Spread the love

LEAVE A REPLY

Please enter your comment!
Please enter your name here