ಅಭಿನಯಗೀತೆ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಇಲ್ಲಿನ ಹಾತಲಗೇರಿಯ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಸತೀಶ ಸುರೇಶ ಮೇಲ್ಮನಿ ಗದಗ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಅಭಿನಯಗೀತೆ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

Advertisement

ಈ ವಿದ್ಯಾರ್ಥಿಯ ಸಾಧನೆಗೆ ಗದಗ ಜಿಲ್ಲಾ ಉಪನಿರ್ದೇಶಕರಾದ ಆರ್.ಎಸ್. ಬುರಡಿ, ಅಭಿವೃದ್ಧಿ ಅಧಿಕಾರಿಗಳಾದ ಜಿ.ಎಲ್. ಬಾರಾಟಕ್ಕೆ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ವಿ.ವಿ. ನಡುವಿನಮನಿ, ಕ್ಷೇತ್ರ ಸಮನ್ವಯ ಅಧಿಕಾರಿಗಳಾದ ಎಸ್.ಜೆ. ಭಾವಿಕಟ್ಟಿ, ಅಕ್ಷರ ದಾಸೋಹ ಅಧಿಕಾರಿಗಳಾದ ಶಂಕರ ಹಡಗಲಿ, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಚಂದ್ರಶೇಖರ ಶಿವಶಿಂಪಗೇರ, ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಗೋವಿಂದಪ್ಪ ಪೂಜಾರ, ಉಪಾಧ್ಯಕ್ಷರು, ಸರ್ವ ಸದಸ್ಯರು ಮತ್ತು ಶಾಲೆಯ ಪ್ರಧಾನ ಗುರುಮಾತೆ, ಶಿಕ್ಷಕ ವೃಂದ, ಗ್ರಾಮದ ಗುರುಹಿರಿಯರು ಅಭಿನಂದಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here