ಮಕ್ಕಳನ್ನು ಸರಕಾರಿ ಶಾಲೆಗಳಿಗೆ ಕಳಿಸಿ

0
Spread the love

ವಿಜಯಸಾಕ್ಷಿ ಸುದ್ದಿ, ಮುಳಗುಂದ: ಕನ್ನಡ ನಮ್ಮ ಮಾತೃಭಾಷೆಯಾಗಿದ್ದು, ಕನ್ನಡ ಭಾಷೆ ಉಳಿಸಿ-ಬೆಳೆಸಲು ಕನ್ನಡದ ಬಗೆಗಿನ ಆಸಕ್ತಿ ಹೆಚ್ಚಾಗಬೇಕು ಎಂದು ಶಿಕ್ಷಕಿ ವಿ.ಎಂ. ಕಂಠಿ ಹೇಳಿದರು.

Advertisement

ಅವರು ಪಟ್ಟಣದ ಸರ್ಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆ ನಂ. 1ರಲ್ಲಿ 70ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ತಾಯಿಗೆ ಇರುವಷ್ಟೇ ಮಹತ್ವ ನಮ್ಮ ಕನ್ನಡ ಭಾಷೆಗೆ ಇರುವುದರಿಂದ, ಪೋಷಕರು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಕಳಿಸಬೇಕು. ಕನ್ನಡ ಶಾಲೆಯಲ್ಲಿ ನುರಿತ, ಅನುಭವಿ ಶಿಕ್ಷಕರ ವೃಂದವಿದ್ದು, ಸರ್ಕಾರ ಮಕ್ಕಳಿಗಾಗಿ ಹಲವಾರು ಯೋಜನೆಗಳನ್ನು ರೂಪಿಸುವ ಮೂಲಕ ಪ್ರತಿಯೊಬ್ಬರೂ ಶಿಕ್ಷಣ ಪಡೆಯಲು ಶ್ರಮಿಸುತ್ತಿದೆ ಎಂದರು.

ಶಾಲಾ ಪ್ರಧಾನಗುರು ಪಿ.ಬಿ. ಕೆಂಚನಗೌಡರ, ಎಂ.ಎ. ಮೆಗಲಮನಿ, ಎಂ.ಎ. ಕೊಪ್ಪಳ, ಕೆ.ಎಂ. ಹೆರಕಲ್, ಮಂಜುನಾಥ ಕಲ್ಯಾಣಮಠ, ವೀಣಾ ಟಿ., ಎಸ್.ಎಚ್. ಉಪ್ಪಾರ, ಎಚ್.ಆರ್. ಭಜಂತ್ರಿ, ಎಸ್.ವಿ. ಹಿರೇಮಠ, ಎಸ್.ಡಿ. ಪಂಡಿತ, ರೇಣುಕಾ ಪರ್ವತಗೌಡರ, ಶಭಾನಾ ಡಾಲಾಯತ್, ರಾಧಾ ಬಾತಾಖಾನಿ, ಕವಿತಾ ಬಿನ್ನಾಳ ಇದ್ದರು.


Spread the love

LEAVE A REPLY

Please enter your comment!
Please enter your name here