4 ಕಾರು, ಲಾರಿ ನಡುವೆ ಸರಣಿ ಅಪಘಾತ: ಐವರಿಗೆ ಗಂಭೀರ ಗಾಯ

0
Spread the love

ಆನೇಕಲ್: ಹೊಸೂರು ಸಮೀಪದ ಪೆರಂಡಪಲ್ಲಿಯ ಬೆಂಗಳೂರು–ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಲಾರಿ ಮತ್ತು ನಾಲ್ಕು ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

Advertisement

ಘಟನೆಯಲ್ಲಿ ಕಾರುಗಳು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಅಪಘಾತದ ಪರಿಣಾಮವಾಗಿ ಹೆದ್ದಾರಿಯಲ್ಲಿ ಗಣನೀಯ ಟ್ರಾಫಿಕ್ ಜಾಮ್ ಉಂಟಾಗಿತ್ತು. ಮಾಹಿತಿ ಪಡೆದ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ, ಕ್ರೇನ್‌ ಸಹಾಯದಿಂದ ಹಾನಿಗೊಳಗಾದ ವಾಹನಗಳನ್ನು ರಸ್ತೆದಿಂದ ತೆರವುಗೊಳಿಸಿದರು.

ಗಾಯಾಳುಗಳನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಅಪಘಾತದ ಕಾರಣ ಪತ್ತೆ ಹಚ್ಚಲು ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here