ವಿಜಯಸಾಕ್ಷಿ ಸುದ್ದಿ, ಗದಗ: ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಪ್ರತ್ಯೇಕ ಹಣ ಮೀಸಲಿಡಬೇಕು ಎಂದು ಲಿಂಗತ್ವ ಮತ್ತು ಲೈಂಗಿಕ ಬಹುತ್ವಕ್ಕಾಗಿ ಚಳುವಳಿಯ ರಾಜ್ಯ ಸಹ ಸಂಚಾಲಕಿ ವೈಶಾಲಿ ಹೇಳಿದರು.
ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ 46 ಸಾವಿರ ಜನಸಂಖ್ಯೆಯಿದೆ. ಜಿಲ್ಲೆಯಲ್ಲಿ 1550 ಜನರು ಇದ್ದಾರೆ. ಹೀಗಾಗಿ ಆಡಳಿತದಲ್ಲಿರುವ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಮುನ್ನ ತಮ್ಮ ಪ್ರಣಾಳಿಕೆಯಲ್ಲಿ ಲೈಂಗಿಕ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ವಾರ್ಷಿಕ 200 ಕೋಟಿ ರೂ.ಹಣವನ್ನು ಮೀಸಲಿಡಲಾಗಿದೆ. ಆದರೆ ಅದನ್ನು ಇನ್ನೂ ಜಾರಿಗೆ ತಂದಿಲ್ಲ. ಕೂಡಲೇ ಹಣವನ್ನು ಬಿಡುಗಡೆ ಮಾಡಬೇಕು ಎಂದರು.
ಲಿಂಗತ್ವ ಅಲ್ಪಸಂಖ್ಯಾತರಿಗೆ ವಸತಿ ಸೌಲಭ್ಯ ನೀಡಬೇಕು. ನಮ್ಮ ಸಮುದಾಯದವರಿಗೆ ವಸತಿಗಾಗಿ ಪ್ರತ್ಯೇಕವಾದ ಯೋಜನೆ ರೂಪಿಸಬೇಕು. ಲಿಂಗತ್ವ ಅಲ್ಪಸಂಖ್ಯಾತರು ಉದ್ಯಮಶೀಲತೆಯಲ್ಲಿ ತೊಡಗಿಸಿಕೊಳ್ಳಲು ಯೋಜನೆ ರೂಪಿಸಬೇಕು. ಪ್ರತಿ ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಗೆ 2 ಲಕ್ಷ ರೂ ಆರ್ಥಿಕ ನೆರವು ನೀಡಲು ಬಜೆಟ್ ಮೀಸಲಿಡಬೇಕು. ಉಚಿತ ಲಿಂಗ ಪರಿವರ್ತನೆ ಶಸ್ತç ಚಿಕಿತ್ಸೆ ಮತ್ತು ಶಸ್ತçಚಿಕಿತ್ಸೆಯ ನಂತರ 6 ತಿಂಗಳ ಆರೈಕೆಯ ಬೆಂಬಲ ನೀಡಲು ಬಜೆಟ್ ಮೀಸಲಿಡಬೇಕು. ಶೇ.1 ಮೀಸಲಾತಿಯಲ್ಲಿ ಉದ್ಯೋಗವನ್ನು ಪಡೆಯಲು ಸರ್ಕಾರವು ಲಿಂಗತ್ವ ಅಲ್ಪಸಂಖ್ಯಾತರಿಗೆ ತರಬೇತಿ ಮತ್ತು ಕೋಚಿಂಗ್ ನೀಡಲು ಬಜೆಟ್ ಮೀಸಲಿಡಬೇಕು. ಲಿಂಗತ್ವ ಮತ್ತು ಲೈಂಗಿಕ ಅಲ್ಪಸಂಖ್ಯಾತರ ಸರ್ವತೋಮುಖ ಅಭಿವೃದ್ಧಿಗಾಗಿ ವಾರ್ಷಿಕ ರೂ. 200 ಕೋಟೆಯನ್ನು ಮೀಸಲಿಡಬೇಕು. ಇದಕ್ಕಾಗಿ ಪ್ರತ್ಯೇಕವಾಗಿ ನಿಯಮವನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಆದಿತ್ಯ ಬಾಂಡಿಗೆ, ಪುಷ್ಪ ಬಿಜಾಪುರ, ಆರಾಧನಾ ಬಣಕಾರ ಇದ್ದರು.