HomeIndia Newsನೇಪಾಳದಲ್ಲಿ ರಣಭೀಕರ ಪ್ರವಾಹ: 8 ಮಂದಿ ಸಾವು, 41 ಭದ್ರತಾ ಸಿಬ್ಬಂದಿ ಸೇರಿ ನೂರಾರು ಮಂದಿ...

ನೇಪಾಳದಲ್ಲಿ ರಣಭೀಕರ ಪ್ರವಾಹ: 8 ಮಂದಿ ಸಾವು, 41 ಭದ್ರತಾ ಸಿಬ್ಬಂದಿ ಸೇರಿ ನೂರಾರು ಮಂದಿ ನಾಪತ್ತೆ

For Dai;y Updates Join Our whatsapp Group

ಕಠ್ಮಂಡು: ನೇಪಾಳದಲ್ಲಿ ಭೋಟೆ ಕೋಶಿ ನದಿಯಲ್ಲಿ ಉಂಟಾದ ಹಠಾತ್ ಪ್ರವಾಹ ಭಾರೀ ಅನಾಹುತ ಸೃಷ್ಟಿಸಿದೆ. ಪ್ರವಾಹದಲ್ಲಿ ಕನಿಷ್ಠ 8 ಮಂದಿ ಮೃತಪಟ್ಟಿದ್ದು, 41 ಭದ್ರತಾ ಸಿಬ್ಬಂದಿ ಸೇರಿದಂತೆ ನೂರಾರು ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ನಾಪತ್ತೆಯಾಗಿರುವ 41 ಭದ್ರತಾ ಸಿಬ್ಬಂದಿಯಲ್ಲಿ 32 ಮಂದಿ ನೇಪಾಳ ಪೊಲೀಸರು ಹಾಗೂ 9 ಮಂದಿ ಸಶಸ್ತ್ರ ಪೊಲೀಸ್ ಪಡೆಯ ಸಿಬ್ಬಂದಿ ಸೇರಿದ್ದಾರೆ. ಈವರೆಗೆ 8 ಮೃತದೇಹಗಳನ್ನು ಪತ್ತೆಹಚ್ಚಲಾಗಿದ್ದು, ನಾಪತ್ತೆಯಾಗಿರುವವರಿಗಾಗಿ ರಕ್ಷಣಾ ತಂಡಗಳು ಭರದಿಂದ ಶೋಧ ಕಾರ್ಯ ನಡೆಸುತ್ತಿವೆ.

ಸ್ಥಳೀಯ ಕಾಲಮಾನ ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಭೋಟೆ ಕೋಶಿ ನದಿಯಲ್ಲಿ ಹಠಾತ್ ಪ್ರವಾಹ ಉಂಟಾಗಿದೆ. ನದಿ ದಂಡೆಯಲ್ಲಿರುವ ಜನರು ಕೂಡಲೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ನದಿಯುದ್ದಕ್ಕೂ ವಾಸಿಸುವ ನಿವಾಸಿಗಳು ಹೆಚ್ಚಿನ ನಿಗಾ ವಹಿಸುವಂತೆ ಸೂಚಿಸಲಾಗಿದೆ.

ನೇಪಾಳ-ಟಿಬೆಟ್ ಗಡಿಯ ಸಮೀಪದ ರಸುವಾ ಜಿಲ್ಲೆಯಲ್ಲಿ ಪ್ರವಾಹದ ರಭಸಕ್ಕೆ ಇಡೀ ಗ್ರಾಮವೇ ಕೊಚ್ಚಿಹೋಗಿದೆ ಎಂದು ವರದಿಯಾಗಿದೆ. ಪ್ರಾಥಮಿಕ ಮಾಹಿತಿಯಂತೆ ಸುಮಾರು 1,000 ಮಂದಿ ಪ್ರವಾಹದಲ್ಲಿ ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗಿದ್ದು, ಈ ಸಂಖ್ಯೆ ಇನ್ನೂ ಅಧಿಕೃತವಾಗಿ ದೃಢಪಟ್ಟಿಲ್ಲ.

ರಸುವಾ ಜಿಲ್ಲೆಯ ಸಯಾಪ್ರು ಬೆಸಿ ಹಾಗೂ ತಿಮುರೆ ಪ್ರದೇಶಗಳು ಪ್ರವಾಹದಿಂದ ತೀವ್ರವಾಗಿ ಹಾನಿಗೊಳಗಾಗಿವೆ. ಹಲವು ಗ್ರಾಮಗಳು ಹಾಗೂ ನಿರ್ಮಾಣ ಹಂತದಲ್ಲಿದ್ದ ಯೋಜನಾ ಪ್ರದೇಶಗಳು ನೀರಿನ ರಭಸಕ್ಕೆ ಕೊಚ್ಚಿಹೋಗಿವೆ ಎನ್ನಲಾಗಿದೆ.

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳು ಮುಂದುವರಿದಿದ್ದು, ನಾಪತ್ತೆಯಾದವರಿಗಾಗಿ ಭದ್ರತಾ ಪಡೆಗಳು ಹಾಗೂ ರಕ್ಷಣಾ ತಂಡಗಳು ಯುದ್ಧೋಪಾದಿಯಲ್ಲಿ ಶೋಧ ನಡೆಸುತ್ತಿವೆ. ಸದ್ಯ ಪರಿಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವೂ ವ್ಯಕ್ತವಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img