5 ವರ್ಷದಿಂದ ಪ್ರೀತಿಸ್ತಿದ್ದವಳು ಕೈಕೊಟ್ಟಿದ್ದಕ್ಕೆ ಮನನೊಂದು ಆತ್ಮಹತ್ಯೆ..!

0
Spread the love

ರಾಯಚೂರು: ಪ್ರೇಯಸಿಗೆ ಬೇರೊಬ್ಬನ ಜೊತೆ ನಿಶ್ಚಿತಾರ್ಥವಾಗಿದಕ್ಕೆ ಆತ್ಮಹತ್ಯೆಗೆ ಶರಣಾದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣ ಜನತಾ ಹೌಸ್ ಕಾಲೋನಿಯಲ್ಲಿ ನಡೆದಿದೆ. ಮಾನ್ವಿ ನಿವಾಸಿ ವರುಣ್ (26)ಆತ್ಮಹತ್ಯೆಗೆ ಶರಣಾದ ಯುವಕ.

Advertisement

ಇನ್​ಸ್ಟ್ರಾಗ್ರಾಂ ಮೂಲಕ ಪರಿಚಯವಾಗಿದ್ದ ಯುವತಿ ಜೊತೆ ಮೃತ ವರುಣ್ ಪ್ರೀತಿ ಮಾಡಿದ್ದ. ಬಳಿಕ ಆ ಯುವತಿ ಬೇರೊಬ್ಬರ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಹಿನ್ನೆಲೆ ಮನನೊಂದು ವರುಣ್ ಮನೆಯಲ್ಲಿ ಫ್ಯಾನ್​ಗೆ ನೇಣುಬಿಗಿದುಕೊಂಡು ಕೊನೆಯುಸಿರೆಳೆದಿದ್ದಾನೆ. ಈ ಕುರಿತು ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.


Spread the love

LEAVE A REPLY

Please enter your comment!
Please enter your name here