HomeCrime Newsಶಿರಹಟ್ಟಿ ಕ್ಷೇತ್ರ ಶಿಕ್ಷಣಾಧಿಕಾರಿ ಅಮಾನತು

ಶಿರಹಟ್ಟಿ ಕ್ಷೇತ್ರ ಶಿಕ್ಷಣಾಧಿಕಾರಿ ಅಮಾನತು

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಶಿಕ್ಷಣ ಇಲಾಖೆಯ ಅನುದಾನ ದುರುಪಯೋಗದ ಹಿನ್ನೆಲೆಯಲ್ಲಿ ಶಿರಹಟ್ಟಿ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಂ. ಮುಂದಿನಮನಿ ಅವರನ್ನು ಅಮಾನತ್ತು ಮಾಡಿ ಸರಕಾರ ಆದೇಶ ಹೊರಡಿಸಿದೆ.

೨೦೨೨-೨೩ನೇ ಸಾಲಿನಲ್ಲಿ ತಾಲೂಕು ಪಂಚಾಯಿತಿಯಿಂದ ಶಿಕ್ಷಕರ ವೆಚ್ಚಕ್ಕಾಗಿ ಮೀಸಲಿರಿಸಲಾಗಿದ್ದ ಅನುದಾನವನ್ನು ನಿಯಮಾವಳಿಯಂತೆ ಎಸ್‌ಡಿಎಂಸಿ ಖಾತೆಗೆ ಜಮೆ ಮಾಡದೆ ಬಿಇಓ ಅವರು ಸ್ವತಃ ೮ ಲಕ್ಷ ರೂಗಳನ್ನು ಖರ್ಚು ಮಾಡಿ ನಿಯಮ ಮೀರಿದ್ದಾರೆ.

ಇವರ ವಿರುದ್ದ ಕರ್ನಾಟಕ ನಾಗರೀಕ ಸೇವಾ ನಿಯಮ ೧೯೫೭ರ ಪ್ರಕಾರ ಸೂಕ್ತ ಕ್ರಮ ಜರುಗಿಸುವಂತೆ ಅಪರ ಆಯುಕ್ತರು ಶಿಕ್ಷಣ ಇಲಾಖೆ ಧಾರವಾಡ ಇವರು ಸರಕಾರಕ್ಕೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಇಲಾಖೆ ವಿಚಾರಣೆ ಬಾಕಿ ಇರಿಸಿ, ತಕ್ಷಣದಿಂದಲೇ ಜಾರಿಗೆ ಬರುವಂತೆ ಫೆ.೧೭ರಂದು ಅಮಾನತುಗೊಳಿಸಿ ಆದೇಶಿಸಿದೆ.
ಆರೋಪಿತ ಅಧಿಕಾರಿಯ ಲೀನ್ ಅನ್ನು ಹಿರಿಯ ಉಪನ್ಯಾಸಕರು, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಹಾವೇರಿ ಇಲ್ಲಿನ ಖಾಲಿ ಹುದ್ದೆಗೆ ವರ್ಗಾಯಿಸಿ ಆದೇಶಿಸಲಾಗಿದೆ.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!