ಕಾರವಾರ: ಉತ್ತರ ಕನ್ನಡದ ಶಿರೂರರಲ್ಲಿ ಗುಡ್ಡ ಕುಸಿತಗೊಂಡು ಇಂದಿಗೆ 8 ದಿನಗಳಾಗಿವೆ. ಮಣ್ಣಿನಡಿ ಸಿಲುಕಿದ್ದವರಿಗಾಗಿ ಶೋಧ ಕಾರ್ಯ ನಡೆಯುತ್ತಿರುವಾಗಲೇ ಮತ್ತೊಂದು ಶವ ಸಿಕ್ಕಿದೆ. ಈವರೆಗೆ ಒಟ್ಟು 8 ಮೃತದೇಹಗಳು ಪತ್ತೆಯಾಗಿವೆ. ಸಣ್ಣಿ ಹನುಮಂತ ಗೌಡ (67) ಮಹಿಳೆ ಶವ ಸಿಕ್ಕಿದೆ. ಘಟನೆ ನಡೆದ 8 ದಿನದ ಬಳಿಕ ಶವ ಪತ್ತೆಯಾಗಿದೆ. ಇನ್ನೂ ಮೂವರಿಗೆ ಶೋಧ ಕಾರ್ಯ ಮುಂದುವರಿದಿದೆ.
Advertisement
ಮಣ್ಣಿನ ಕುಸಿತದಿಂದ ನದಿಯಲ್ಲಿ ತೇಲಿಹೋದ ಗಂಗೆಕೊಳ್ಳದ ಲೋಕೇಶ್ ನಾಯ್ಕ, ಶಿರೂರಿನ ಜಗನ್ನಾಥ ಜಟ್ಟಿ, ಉಳವರೆ ಗ್ರಾಮದ ಸಣ್ಣಿ ಹನುಮಂತಗೌಡ, ಕೇರಳ ಮೂಲದ ಅರ್ಜುನ್ ಶವ ಪತ್ತೆಯಾಗಬೇಕಿದೆ. ಶಂಕಿತ ಸ್ಥಳದಲ್ಲಿ ಶೋಧ ಕಾರ್ಯ ಮಾಡಿದರೂ ಟ್ರಕ್, ಟ್ಯಾಂಕರ್ಗಳು ಮಾತ್ರ ಪತ್ತೆಯಾಗಿಲ್ಲ. ಎನ್ಡಿಆರ್ಎಫ್, ಎಸ್ಡಿಆರ್ಎಫ್, ಆರ್ಮಿ ಕಮಾಂಡೋಗಳ ತಂಡದಿಂದ ಶೋಧ ಕಾರ್ಯ ಮುಂದುವರೆದಿದೆ.