ಹಾಸನ:- ಅರಸೀಕೆರೆ ತಾಲೂಕಿನ ಜಾವಗಲ್ ಬಳಿಯ ದೊಡ್ಡಘಟ್ಟ ಗ್ರಾಮದಲ್ಲಿ ಆಘಾತಕಾರಿ ಘಟನೆ ನಡೆದಿದ್ದು, ವಿಷಕಾರಿ ಮೇವು ತಿಂದು 70ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿವೆ.
ಕುರಿಗಾಹಿಗಳು 800 ಕುರಿಗಳನ್ನು ತುಮಕೂರಿನ ಶಿರಾದಿಂದ ಕರೆದುಕೊಂಡು ದೊಡ್ಡಘಟ್ಟಕ್ಕೆ ಬಂದಿದ್ದರು. ಈ ವೇಳೆ ವಿಷಕಾರಿ ಮೇವು ತಿಂದು ಕುರಿಗಳು ಸಾವನ್ನಪ್ಪಿವೆ. ಹೊಲಗಳ ತುಂಬೆಲ್ಲಾ ಕುರಿಗಳು ಸತ್ತು ಬಿದ್ದಿವೆ. ಮೆಕ್ಕೆಜೋಳದ ಚಿಗುರು ತಿಂದು ಕುರಿಗಳು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಕುರಿಗಳು ಶಿರಾ ಮೂಲದ ರಾಜಣ್ಣ ಎಂಬುವವರಿಗೆ ಸೇರಿದ್ದು ಎಂದು ತಿಳಿದು ಬಂದಿದೆ. ಕುರಿಗಳನ್ನು ಕಳೆದುಕೊಂಡ ರೈತರು ಕಂಗಾಲಾಗಿದ್ದಾರೆ. ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.



