ಆಘಾತಕಾರಿ ಘಟನೆ: ಸೇನಾ ವಾಹನದ ಮೇಲೆ ಬಂಡೆ ಬಿದ್ದು ಇಬ್ಬರು ಯೋಧರು ಸಾವು

0
Spread the love

ಶ್ರೀನಗರ:- ಸೇನಾ ವಾಹನದ ಮೇಲೆ ಬಂಡೆ ಬಿದ್ದು ಇಬ್ಬರು ಯೋಧರು ಸಾವನ್ನಪ್ಪಿರುವ ಘಟನೆ ಪೂರ್ವ ಲಡಾಖ್‌ನಲ್ಲಿ ಜರುಗಿದೆ.

Advertisement

ಘಟನೆಯಲ್ಲಿ ಇತರ ಮೂವರು ಸೇನಾ ಅಧಿಕಾರಿಗಳು ಗಾಯಗೊಂಡಿದ್ದಾರೆ. ಮೃತ ಸೈನಿಕರಲ್ಲಿ ಒಬ್ಬರು ಭಾರತೀಯ ಸೇನೆಯ ಲೆಫ್ಟಿನೆಂಟ್ ಕರ್ನಲ್ ಆಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಲಡಾಖ್‌ನಲ್ಲಿ ಸೇನಾ ಬೆಂಗಾವಲು ಪಡೆಯ ವಾಹನವೊಂದರ ಮೇಲೆ ಬಂಡೆಯೊಂದು ಬಿದ್ದು, ಲೆಫ್ಟಿನೆಂಟ್ ಕರ್ನಲ್ ಭಾನು ಪ್ರತಾಪ್ ಸಿಂಗ್ ಮತ್ತು ಲ್ಯಾನ್ಸ್-ದಫದಾರ್ ದಲ್ಜೀತ್ ಸಿಂಗ್ ಕರ್ತವ್ಯದ ವೇಳೆ ಸಾವನ್ನಪ್ಪಿದ್ದಾರೆ ಎಂದು
ಮಾಹಿತಿ ನೀಡಿದ್ದಾರೆ.

ಇಂದು ಬೆಳಗ್ಗೆ ಲಡಾಖ್‌ನ ಡರ್ಬುಕ್‌ನಿಂದ ಚೊಂಗ್ತಾಶ್‌ಗೆ ಸೇನಾ ಬೆಂಗಾವಲು ಪಡೆಯು ಚಲಿಸುತ್ತಿದ್ದಾಗ ವಾಹನವು ಬಂಡೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಲೆಫ್ಟಿನೆಂಟ್ ಕರ್ನಲ್ ಮತ್ತು ಯೋಧ ಸ್ಥಳದಲ್ಲೇ ಸಾವನ್ನಪ್ಪಿದ್ದರು ಎನ್ನಲಾಗಿದೆ. ಗಾಯಾಳುಗಳನ್ನು ಲೇಹ್‌ನಲ್ಲಿರುವ ಸೇನಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದು ಬಂದಿದೆ.


Spread the love

LEAVE A REPLY

Please enter your comment!
Please enter your name here